Featured

ಆನ್ ಲೈನ್ ವಂಚನೆಗೆ ಸಿಲುಕಿದ ನಟಿ ನಗ್ಮಾ , ಲಿಂಕ್ ಕ್ಲಿಕ್ ಮಾಡಿ ಹಣ ಕಳೆದುಕೊಂಡ ನಟಿ – Vishwanews24

ಆನ್ ಲೈನ್ ವಂಚನೆಗೆ ಸಿಲುಕಿದ ನಟಿ ನಗ್ಮಾ , ಲಿಂಕ್ ಕ್ಲಿಕ್ ಮಾಡಿ ಹಣ ಕಳೆದುಕೊಂಡ ನಟಿ

ಹುಭಾಷಾ ನಟಿ ನಗ್ಮಾ ತಮ್ಮ ಮೊಬೈಲ್ಗೆ ಬಂದ ಲಿಂಕ್ವೊಂದನ್ನು ಕ್ಲಿಕ್ ಮಾಡಿ ಒಂದು ಲಕ್ಷ ರೂಪಾಯಿ ಹಣ ಕಳೆದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ನಟಿ ಹಾಗೂ ರಾಜಕಾರಣಿ, ಕನ್ನಡದಲ್ಲಿ ಕುರುಬನ ರಾಣಿ ಚಿತ್ರದಲ್ಲಿ ನಟಿಸಿದ್ದ ನಟಿ ನಗ್ಮಾ ಮೊರಾರ್ಜಿಗೆ ಸೈಬರ್ ವಂಚನೆ ಆಗಿದೆ.

ಬಹುಭಾಷಾ ನಟಿ ನಗ್ಮಾ ತಮ್ಮ ಮೊಬೈಲ್ಗೆ ಬಂದ ಲಿಂಕ್ವೊಂದನ್ನು ಕ್ಲಿಕ್ ಮಾಡಿ ಒಂದು ಲಕ್ಷ ರೂಪಾಯಿ ಹಣ ಕಳೆದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಕೆವೈಸಿ ವಂಚನೆಯಿಂದಾಗಿ ನಟಿ ನಗ್ಮಾ ಮೊರಾರ್ಜಿ ಅವರು 1 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಕೇವಲ ಒಂದು ಲಕ್ಷ ಕಳೆದುಕೊಂಡಿದ್ದಕ್ಕೆ ಖುಷಿ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಟಿ ನಗ್ಮಾ ಫೋನ್ ಗೆ ಥೇಟ್ ಬ್ಯಾಂಕ್ ರೀತಿಯ ಮೆಸೇಜ್ (ಸಂದೇಶ) ಬಂದಿತ್ತು.

ತಮ್ಮ ಮೊಬೈಲ್ಗೆ ಬಂದ ಸ್ಪಾಮ್ ಲಿಂಕ್ನ ಮೇಲೆ ಕ್ಲಿಕ್ ಮಾಡಿದ್ದರಿಂದ 1 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಫೆಬ್ರವರಿ 28 ರಂದು ನಟಿ ನಗ್ಮಾ 99,998 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಬ್ಯಾಂಕ್ಗಳು ಕಳಿಸುವಂಥದ್ದೇ ನಂಬರ್ನಿಂದ ನಗ್ಮಾ ಅವರು ಸಂದೇಶವನ್ನು ಸ್ವೀಕರಿಸಿದ್ದರು. ಇತ್ತೀಚೆಗೆ ನಗ್ಮಾ ಮೊಬೈಲ್ಗೆ ಒಂದು ಲಿಂಕ್ ಮೆಸೇಜ್ ಬಂದಿದೆ.

ನಗ್ಮಾ, ಕೂಡಲೇ ಆ ಲಿಂಕ್ ಕ್ಲಿಕ್ ಮಾಡಿದ್ದಾರೆ. ನಂತರ ಆ ಕಡೆಯಿಂದ ವ್ಯಕ್ತಿಯೊಬ್ಬ ಕರೆ ಮಾಡಿ ನಗ್ಮಾಗೆ ಕೆವೈಸಿ ಕಂಪ್ಲೀಟ್ ಮಾಡುವಂತೆ ಹೇಳಿದ್ದಾನೆ. ವಂಚಕ ಬೆನಿಫಿಷರಿ ಅಕೌಂಟ್ ಸೃಷ್ಟಿ ಮಾಡಿ ತನ್ನ ಖಾತೆಗೆ 1 ಲಕ್ಷ ರೂಪಾಯಿ ಹಣ ಟ್ರಾನ್ಸ್ಫರ್ ಮಾಡಿಕೊಂಡಿದ್ದಾನೆ. ಹಣ ಕಳೆದುಕೊಂಡಿರುವುದು ತಿಳಿಯುತ್ತಿದ್ದಂತೆ ನಗ್ಮಾ, ಕೂಡಲೇ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ಧಾರೆ. ಹಣ ಕಳೆದುಕೊಂಡಿರುವುದಕ್ಕೆ ನಗ್ಮಾ ಬೇಸರ ವ್ಯಕ್ತಪಡಿಸಿದರೂ, ಮತ್ತೊಂದೆಡೆ ಸದ್ಯಕ್ಕೆ 1 ಲಕ್ಷ ಮಾತ್ರ ಕಳೆದುಕೊಂಡಿರುವ ನೆಮ್ಮದಿಯಲ್ಲಿದ್ದಾರಂತೆ.ಅದಲ್ಲದೆ, ಇದು ಯಾವುದೇ ಪ್ರೈವೇಟ್ ನಂಬರ್ ಕೂಡ ಆಗಿರಲಿಲ್ಲ ಎಂದು ನಗ್ಮಾ ಹೇಳಿದ್ದಾರೆ. ಬ್ಯಾಂಕ್ ಖಾತೆ ವಂಚನೆಯ ಮೂಲಕ ಕೆಲವೇ ದಿನಗಳಲ್ಲಿ ಹಲವಾರು ಲಕ್ಷ ರೂಪಾಯಿಗಳನ್ನು ವಂಚಿಸಿದ ಇತರ 80 ಸಂತ್ರಸ್ತರಲ್ಲಿ ನಗ್ಮಾ ಕೂಡ ಸೇರಿದ್ದಾರೆ. ಈ ಎಲ್ಲಾ ವ್ಯಕ್ತಿಗಳು ಒಂದೇ ಖಾಸಗಿ ಬ್ಯಾಂಕ್ನಲ್ಲಿ ಅಕೌಂಟ್ ಹೊಂದಿರುವವರಾಗಿದ್ದಾರೆ. ಅಲ್ಲದೆ, ನಟಿ ನಗ್ಮಾ, ಸೈಬರ್ ಮೋಸದ ಮಾಹಿತಿಯನ್ನೂ ಕೂಡ ಹಂಚಿಕೊಂಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago