Featured

ಆನ್ ಲೈನ್ ವಂಚನೆಗೆ ಸಿಲುಕಿದ ನಟಿ ನಗ್ಮಾ , ಲಿಂಕ್ ಕ್ಲಿಕ್ ಮಾಡಿ ಹಣ ಕಳೆದುಕೊಂಡ ನಟಿ – Vishwanews24

ಆನ್ ಲೈನ್ ವಂಚನೆಗೆ ಸಿಲುಕಿದ ನಟಿ ನಗ್ಮಾ , ಲಿಂಕ್ ಕ್ಲಿಕ್ ಮಾಡಿ ಹಣ ಕಳೆದುಕೊಂಡ ನಟಿ

ಹುಭಾಷಾ ನಟಿ ನಗ್ಮಾ ತಮ್ಮ ಮೊಬೈಲ್ಗೆ ಬಂದ ಲಿಂಕ್ವೊಂದನ್ನು ಕ್ಲಿಕ್ ಮಾಡಿ ಒಂದು ಲಕ್ಷ ರೂಪಾಯಿ ಹಣ ಕಳೆದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ನಟಿ ಹಾಗೂ ರಾಜಕಾರಣಿ, ಕನ್ನಡದಲ್ಲಿ ಕುರುಬನ ರಾಣಿ ಚಿತ್ರದಲ್ಲಿ ನಟಿಸಿದ್ದ ನಟಿ ನಗ್ಮಾ ಮೊರಾರ್ಜಿಗೆ ಸೈಬರ್ ವಂಚನೆ ಆಗಿದೆ.

ಬಹುಭಾಷಾ ನಟಿ ನಗ್ಮಾ ತಮ್ಮ ಮೊಬೈಲ್ಗೆ ಬಂದ ಲಿಂಕ್ವೊಂದನ್ನು ಕ್ಲಿಕ್ ಮಾಡಿ ಒಂದು ಲಕ್ಷ ರೂಪಾಯಿ ಹಣ ಕಳೆದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಕೆವೈಸಿ ವಂಚನೆಯಿಂದಾಗಿ ನಟಿ ನಗ್ಮಾ ಮೊರಾರ್ಜಿ ಅವರು 1 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಕೇವಲ ಒಂದು ಲಕ್ಷ ಕಳೆದುಕೊಂಡಿದ್ದಕ್ಕೆ ಖುಷಿ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಟಿ ನಗ್ಮಾ ಫೋನ್ ಗೆ ಥೇಟ್ ಬ್ಯಾಂಕ್ ರೀತಿಯ ಮೆಸೇಜ್ (ಸಂದೇಶ) ಬಂದಿತ್ತು.

ತಮ್ಮ ಮೊಬೈಲ್ಗೆ ಬಂದ ಸ್ಪಾಮ್ ಲಿಂಕ್ನ ಮೇಲೆ ಕ್ಲಿಕ್ ಮಾಡಿದ್ದರಿಂದ 1 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಫೆಬ್ರವರಿ 28 ರಂದು ನಟಿ ನಗ್ಮಾ 99,998 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಬ್ಯಾಂಕ್ಗಳು ಕಳಿಸುವಂಥದ್ದೇ ನಂಬರ್ನಿಂದ ನಗ್ಮಾ ಅವರು ಸಂದೇಶವನ್ನು ಸ್ವೀಕರಿಸಿದ್ದರು. ಇತ್ತೀಚೆಗೆ ನಗ್ಮಾ ಮೊಬೈಲ್ಗೆ ಒಂದು ಲಿಂಕ್ ಮೆಸೇಜ್ ಬಂದಿದೆ.

ನಗ್ಮಾ, ಕೂಡಲೇ ಆ ಲಿಂಕ್ ಕ್ಲಿಕ್ ಮಾಡಿದ್ದಾರೆ. ನಂತರ ಆ ಕಡೆಯಿಂದ ವ್ಯಕ್ತಿಯೊಬ್ಬ ಕರೆ ಮಾಡಿ ನಗ್ಮಾಗೆ ಕೆವೈಸಿ ಕಂಪ್ಲೀಟ್ ಮಾಡುವಂತೆ ಹೇಳಿದ್ದಾನೆ. ವಂಚಕ ಬೆನಿಫಿಷರಿ ಅಕೌಂಟ್ ಸೃಷ್ಟಿ ಮಾಡಿ ತನ್ನ ಖಾತೆಗೆ 1 ಲಕ್ಷ ರೂಪಾಯಿ ಹಣ ಟ್ರಾನ್ಸ್ಫರ್ ಮಾಡಿಕೊಂಡಿದ್ದಾನೆ. ಹಣ ಕಳೆದುಕೊಂಡಿರುವುದು ತಿಳಿಯುತ್ತಿದ್ದಂತೆ ನಗ್ಮಾ, ಕೂಡಲೇ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ಧಾರೆ. ಹಣ ಕಳೆದುಕೊಂಡಿರುವುದಕ್ಕೆ ನಗ್ಮಾ ಬೇಸರ ವ್ಯಕ್ತಪಡಿಸಿದರೂ, ಮತ್ತೊಂದೆಡೆ ಸದ್ಯಕ್ಕೆ 1 ಲಕ್ಷ ಮಾತ್ರ ಕಳೆದುಕೊಂಡಿರುವ ನೆಮ್ಮದಿಯಲ್ಲಿದ್ದಾರಂತೆ.ಅದಲ್ಲದೆ, ಇದು ಯಾವುದೇ ಪ್ರೈವೇಟ್ ನಂಬರ್ ಕೂಡ ಆಗಿರಲಿಲ್ಲ ಎಂದು ನಗ್ಮಾ ಹೇಳಿದ್ದಾರೆ. ಬ್ಯಾಂಕ್ ಖಾತೆ ವಂಚನೆಯ ಮೂಲಕ ಕೆಲವೇ ದಿನಗಳಲ್ಲಿ ಹಲವಾರು ಲಕ್ಷ ರೂಪಾಯಿಗಳನ್ನು ವಂಚಿಸಿದ ಇತರ 80 ಸಂತ್ರಸ್ತರಲ್ಲಿ ನಗ್ಮಾ ಕೂಡ ಸೇರಿದ್ದಾರೆ. ಈ ಎಲ್ಲಾ ವ್ಯಕ್ತಿಗಳು ಒಂದೇ ಖಾಸಗಿ ಬ್ಯಾಂಕ್ನಲ್ಲಿ ಅಕೌಂಟ್ ಹೊಂದಿರುವವರಾಗಿದ್ದಾರೆ. ಅಲ್ಲದೆ, ನಟಿ ನಗ್ಮಾ, ಸೈಬರ್ ಮೋಸದ ಮಾಹಿತಿಯನ್ನೂ ಕೂಡ ಹಂಚಿಕೊಂಡಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

5 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

6 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

6 hours ago