ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್ ಮಹಿಳೆ
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್ನಿಂದ ಏರ್ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…