ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್ ಮಹಿಳೆ
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್ನಿಂದ ಏರ್ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…