ಬೆಂಗಳೂರು: ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆ ಕೈಗೊಳ್ಳಲು ಹೈಕೋರ್ಟ್ ಸಮ್ಮತಿ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗದಲ್ಲಿ ಬಿಎಸ್ ವೈ ವಿರುದ್ಧ ಪ್ರಕರಣ ದಾಖಲಾಗಿತ್ತು.
ಎಫ್ ಐ ಆರ್ ಗೆ ತಡೆಯಾಜ್ಞೆ ಕೋರಲಾಗಿತ್ತು. ಆದ್ರೀಗ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಜೆಡಿಎಸ್ ನಿಂದ ಬಿಜೆಪಿ ಸೇರಲು ಯಡಿಯೂರಪ್ಪ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಮ್ ಗೌಡ, ಎಂ.ಬಿ.ಮರಮಕಲ್ ವಿರುದ್ಧ ದೂರು ದಾಖಲಾಗಿತ್ತು.
ಇದಾದ ಮೇಲೆ ಎಫ್ ಐ ಆರ್ ರದ್ದು ಮಾಡುವಂತೆ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು, ಸದ್ಯ ಆ ತಡೆಯಾಜ್ಞೆ ಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನ್ಯಾಯಮೂರ್ತಿ ಜಾಮ್ ಮೈಕೆಲ್ ಕುನ್ಹಾ ಅವರ ಪೀಠ ತನಿಖೆಗೆ ಅಸ್ತು ಎಂದು ಆದೇಶ ಹೊರಡಿಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…