ಬೆಂಗಳೂರು: ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆ ಕೈಗೊಳ್ಳಲು ಹೈಕೋರ್ಟ್ ಸಮ್ಮತಿ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗದಲ್ಲಿ ಬಿಎಸ್ ವೈ ವಿರುದ್ಧ ಪ್ರಕರಣ ದಾಖಲಾಗಿತ್ತು.
ಎಫ್ ಐ ಆರ್ ಗೆ ತಡೆಯಾಜ್ಞೆ ಕೋರಲಾಗಿತ್ತು. ಆದ್ರೀಗ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಜೆಡಿಎಸ್ ನಿಂದ ಬಿಜೆಪಿ ಸೇರಲು ಯಡಿಯೂರಪ್ಪ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಮ್ ಗೌಡ, ಎಂ.ಬಿ.ಮರಮಕಲ್ ವಿರುದ್ಧ ದೂರು ದಾಖಲಾಗಿತ್ತು.
ಇದಾದ ಮೇಲೆ ಎಫ್ ಐ ಆರ್ ರದ್ದು ಮಾಡುವಂತೆ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು, ಸದ್ಯ ಆ ತಡೆಯಾಜ್ಞೆ ಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನ್ಯಾಯಮೂರ್ತಿ ಜಾಮ್ ಮೈಕೆಲ್ ಕುನ್ಹಾ ಅವರ ಪೀಠ ತನಿಖೆಗೆ ಅಸ್ತು ಎಂದು ಆದೇಶ ಹೊರಡಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…