ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯ ಅಜೆಂಡಾ. ಶೀಘ್ರ ಇಂತಹ ಸರ್ಕಾರಕ್ಕೆ ಜನರು ಇತಿಶ್ರೀ ಹಾಡುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಪರೇಷನ್ ಕಮಲ ಮಾಡಿ ರಚಿಸಿದ ಸರ್ಕಾರ ಈಗ ಹೇಗೆ ಸಾಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಮಹಾರಾಷ್ಟ್ರದಲ್ಲಿಯೂ ಬಹಿರಂಗ ಷಡ್ಯಂತ್ರ ಮಾಡುತ್ತಿದ್ದಾರೆ. ಪ್ರಜಾಪಸತ್ತಾತ್ಮಕ ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನ ಬಿಜೆಪಿಯವರದ್ದು ಎಂದು ಕಿಡಿಕಾರಿದರು.
ಜನರಿಂದ ನೇರ ಆಯ್ಕೆಯಾಗಿ ಬಂದು ಸರ್ಕಾರ ರಚಿಸಲಿ. ಅದು ಬಿಟ್ಟು ಅಡ್ಡದಾರಿ ಹಿಡಿದು ಸರ್ಕಾರ ರಚಿಸುವುದು ಯಾಕಾಗಿ ಎಂದು ಪ್ರಶ್ನಿಸಿದರು.
ದಲಿತ ಸಿಎಂ ಘೋಷಿಸುವಂತೆ ಕಾಂಗ್ರೆಸ್ಗೆ ಬಿಜೆಪಿ ಒತ್ತಾಯಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಯಾಕೆ ದಲಿತರನ್ನು ಸಿಎಂ ಮಾಡಿಲ್ಲ. ಅವರು ಘೋಷಿಸಲಿ. ಯಡಿಯೂರಪ್ಪ ನಂತರ ಲಿಂಗಾಯತರ ಬದಲಾಗಿ ದಲಿತರಿಗೆ ಸಿಎಂ ಸ್ಥಾನ ನೀಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ನಲ್ಲಿ ಯಾರನ್ನು ಸಿಎಂ ಮಾಡಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಸಿದ್ದರಾಮಯ್ಯ ಏನೇ ನಿರ್ಣಯ ಮಾಡಿದರೂ ಅದರಲ್ಲಿ ಸ್ಪಷ್ಟತೆ ಇರುತ್ತದೆ. ಅವರು ಪಕ್ಷಕ್ಕೆ ಶಕ್ತಿಯಿದ್ದಂತೆ ಎಂದು ಇದೇ ವೇಳೆ ತಿಳಿಸಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…