Featured

ಆಪರೇಷನ್ ಕಮಲ ಬಿಜೆಪಿಯ ಅಜೆಂಡಾ; ಇಂತಹ ಸರ್ಕಾರಕ್ಕೆ ಜನರು ಶೀಘ್ರ ಇತಿಶ್ರೀ ಹಾಡುತ್ತಾರೆ : ಎಂ.ಬಿ. ಪಾಟೀಲ್ -Vishwanews24

ಆಪರೇಷನ್ ಕಮಲ ಬಿಜೆಪಿಯ ಅಜೆಂಡಾ; ಇಂತಹ ಸರ್ಕಾರಕ್ಕೆ ಜನರು ಶೀಘ್ರ ಇತಿಶ್ರೀ ಹಾಡುತ್ತಾರೆ..

ಸಿದ್ದರಾಮಯ್ಯ ಅವರು ಪಕ್ಷಕ್ಕೆ ಶಕ್ತಿಯಿದ್ದಂತೆ..

ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯ ಅಜೆಂಡಾ. ಶೀಘ್ರ ಇಂತಹ ಸರ್ಕಾರಕ್ಕೆ ಜನರು ಇತಿಶ್ರೀ ಹಾಡುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಪರೇಷನ್ ಕಮಲ ಮಾಡಿ ರಚಿಸಿದ ಸರ್ಕಾರ ಈಗ ಹೇಗೆ ಸಾಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಮಹಾರಾಷ್ಟ್ರದಲ್ಲಿಯೂ ಬಹಿರಂಗ ಷಡ್ಯಂತ್ರ ಮಾಡುತ್ತಿದ್ದಾರೆ. ಪ್ರಜಾಪಸತ್ತಾತ್ಮಕ ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನ ಬಿಜೆಪಿಯವರದ್ದು ಎಂದು ಕಿಡಿಕಾರಿದರು.

ಜನರಿಂದ ನೇರ ಆಯ್ಕೆಯಾಗಿ ಬಂದು ಸರ್ಕಾರ ರಚಿಸಲಿ. ಅದು ಬಿಟ್ಟು ಅಡ್ಡದಾರಿ ಹಿಡಿದು ಸರ್ಕಾರ ರಚಿಸುವುದು ಯಾಕಾಗಿ ಎಂದು ಪ್ರಶ್ನಿಸಿದರು.

ದಲಿತ ಸಿಎಂ ಘೋಷಿಸುವಂತೆ ಕಾಂಗ್ರೆಸ್‌ಗೆ ಬಿಜೆಪಿ ಒತ್ತಾಯಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಯಾಕೆ ದಲಿತರನ್ನು ಸಿಎಂ ಮಾಡಿಲ್ಲ. ಅವರು ಘೋಷಿಸಲಿ. ಯಡಿಯೂರಪ್ಪ ನಂತರ ಲಿಂಗಾಯತರ ಬದಲಾಗಿ ದಲಿತರಿಗೆ ಸಿಎಂ ಸ್ಥಾನ ನೀಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನಲ್ಲಿ ಯಾರನ್ನು ಸಿಎಂ ಮಾಡಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಸಿದ್ದರಾಮಯ್ಯ ಏನೇ ನಿರ್ಣಯ ಮಾಡಿದರೂ ಅದರಲ್ಲಿ ಸ್ಪಷ್ಟತೆ ಇರುತ್ತದೆ. ಅವರು ಪಕ್ಷಕ್ಕೆ ಶಕ್ತಿಯಿದ್ದಂತೆ ಎಂದು ಇದೇ ವೇಳೆ ತಿಳಿಸಿದರು.

 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

2 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

2 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago