Featured

ಆಪರೇಷನ್ ಕಮಲ ಮಾಡಲ್ಲ, ಸಮ್ಮಿಶ್ರ ಸರ್ಕಾರ ಮಾಡ್ತಿರೋ ಪಾಪಕ್ಕೆ ಅವರೇ ಬೀಳ್ತಾರೆ : ಶೋಭಾ ಕರಂದ್ಲಾಜೆ

ಉಡುಪಿ: ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡಲು ಹೋಗಲ್ಲ. ಸಮ್ಮಿಶ್ರ ಸರ್ಕಾರ ಮಾಡುತ್ತಿರುವ ಪಾಪಕ್ಕೆ ಅವರೇ ಬೀಳುತ್ತಾರೆ. ಮಂತ್ರಿ ಮಂಡಲ ವಿಸ್ತರಣೆಗಾಗಿ ಶಾಸಕರು ಕಾಯುತ್ತಿದ್ದಾರೆ. ಆದಷ್ಟು ಬೇಗ ಸಮ್ಮಿಶ್ರ ಸರ್ಕಾರ ಕೊನೆಗೊಳ್ಳಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಭವಿಷ್ಯ ನುಡಿದಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಭಿನ್ನಮತೀಯರ ಸಮಾಧಾನಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ನಾವು ಜೆಡಿಎಸ್ ಜೊತೆ ಹೋಗಲೇಬಾರದಿತ್ತು ಅಂತ ಕಾಂಗ್ರೆಸ್ ಶಾಸಕರೇ ನಮ್ಮಲ್ಲಿ ಹೇಳುತ್ತಿದ್ದಾರೆ. ಜೆಡಿಎಸ್ ಕಾಂಗ್ರೆಸ್ ನ್ನು ಒಂದು ದಿನ ತಿಂದು ಹಾಕುತ್ತೆ ಅನ್ನೋ ಭಯದಲ್ಲಿದ್ದಾರೆ. ಕಾಂಗ್ರೆಸ್ ನವರು ಹಿಂಬಾಗಿಲಿನ ಮೂಲಕ ಪಾಪದ ಕೃತ್ಯ ಎಸಗಿದ್ದಾರೆ. ನಮ್ಮೊಂದಿಗೆ ಹತ್ತಾರು ಶಾಸಕರು ಸಂಪರ್ಕದಲ್ಲಿದ್ದಾರೆ. ಆದರೆ ನಮಗೆ ಹೈಕಮಾಂಡ್ ನ ಆದೇಶವಿದೆ. ಹಾಗಾಗಿ ನಾವು ಸರ್ಕಾರ ಬೀಳಿಸಲ್ಲ ಎಂದಿದ್ದಾರೆ.

ಸಚಿವ ಜಮೀರ್ ಗೆ ರೈತರ ಬಗ್ಗೆ ಕಾಳಜಿ ಇಲ್ಲ. ಅವ್ಯವಹಾರ ಮಾಡಿದ ಅನುಭವಿಗಳಿಗೆ ಅಧಿಕಾರ ಸಿಕ್ಕಿದೆ. ಜಮೀರ್ – ಕುಮಾರಸ್ವಾಮಿ ಮೊನ್ನೆಯವರೆಗೆ ಹೇಗೆ ಕಿತ್ತಾಡಿದ್ದರು ಅನ್ನೋದನ್ನು ನಾವು ನೋಡಿದ್ದೀವಿ. ಯಾವ ರೀತಿ ಯಾವ ಭಾಷೆಯಲ್ಲಿ ಮಾತಾಡಿದ್ದರು ಅನ್ನೋದನ್ನು ಕೇಳಿದ್ದೇವೆ. ಅದೇ ಎಚ್.ಡಿ.ಕೆ ಕ್ಯಾಬಿನೆಟ್ ನಲ್ಲೇ ಇದೇ ಜಮೀರ್ ಈಗ ಮಂತ್ರಿ. ನಾವು ಕಾದು ನೋಡುತ್ತಿದ್ದೀವಿ ಅವರ ಜಗಳಕ್ಕೆ ಏನೇನಾಗುತ್ತೋ ನೋಡಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago