ಉಡುಪಿ: ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡಲು ಹೋಗಲ್ಲ. ಸಮ್ಮಿಶ್ರ ಸರ್ಕಾರ ಮಾಡುತ್ತಿರುವ ಪಾಪಕ್ಕೆ ಅವರೇ ಬೀಳುತ್ತಾರೆ. ಮಂತ್ರಿ ಮಂಡಲ ವಿಸ್ತರಣೆಗಾಗಿ ಶಾಸಕರು ಕಾಯುತ್ತಿದ್ದಾರೆ. ಆದಷ್ಟು ಬೇಗ ಸಮ್ಮಿಶ್ರ ಸರ್ಕಾರ ಕೊನೆಗೊಳ್ಳಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಭವಿಷ್ಯ ನುಡಿದಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಭಿನ್ನಮತೀಯರ ಸಮಾಧಾನಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ನಾವು ಜೆಡಿಎಸ್ ಜೊತೆ ಹೋಗಲೇಬಾರದಿತ್ತು ಅಂತ ಕಾಂಗ್ರೆಸ್ ಶಾಸಕರೇ ನಮ್ಮಲ್ಲಿ ಹೇಳುತ್ತಿದ್ದಾರೆ. ಜೆಡಿಎಸ್ ಕಾಂಗ್ರೆಸ್ ನ್ನು ಒಂದು ದಿನ ತಿಂದು ಹಾಕುತ್ತೆ ಅನ್ನೋ ಭಯದಲ್ಲಿದ್ದಾರೆ. ಕಾಂಗ್ರೆಸ್ ನವರು ಹಿಂಬಾಗಿಲಿನ ಮೂಲಕ ಪಾಪದ ಕೃತ್ಯ ಎಸಗಿದ್ದಾರೆ. ನಮ್ಮೊಂದಿಗೆ ಹತ್ತಾರು ಶಾಸಕರು ಸಂಪರ್ಕದಲ್ಲಿದ್ದಾರೆ. ಆದರೆ ನಮಗೆ ಹೈಕಮಾಂಡ್ ನ ಆದೇಶವಿದೆ. ಹಾಗಾಗಿ ನಾವು ಸರ್ಕಾರ ಬೀಳಿಸಲ್ಲ ಎಂದಿದ್ದಾರೆ.
ಸಚಿವ ಜಮೀರ್ ಗೆ ರೈತರ ಬಗ್ಗೆ ಕಾಳಜಿ ಇಲ್ಲ. ಅವ್ಯವಹಾರ ಮಾಡಿದ ಅನುಭವಿಗಳಿಗೆ ಅಧಿಕಾರ ಸಿಕ್ಕಿದೆ. ಜಮೀರ್ – ಕುಮಾರಸ್ವಾಮಿ ಮೊನ್ನೆಯವರೆಗೆ ಹೇಗೆ ಕಿತ್ತಾಡಿದ್ದರು ಅನ್ನೋದನ್ನು ನಾವು ನೋಡಿದ್ದೀವಿ. ಯಾವ ರೀತಿ ಯಾವ ಭಾಷೆಯಲ್ಲಿ ಮಾತಾಡಿದ್ದರು ಅನ್ನೋದನ್ನು ಕೇಳಿದ್ದೇವೆ. ಅದೇ ಎಚ್.ಡಿ.ಕೆ ಕ್ಯಾಬಿನೆಟ್ ನಲ್ಲೇ ಇದೇ ಜಮೀರ್ ಈಗ ಮಂತ್ರಿ. ನಾವು ಕಾದು ನೋಡುತ್ತಿದ್ದೀವಿ ಅವರ ಜಗಳಕ್ಕೆ ಏನೇನಾಗುತ್ತೋ ನೋಡಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…
ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…