Featured

ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ – vishwanews24

ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ

ವಿಜಯಪುರ: ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು.

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಕೊತ್ತೂರು ಮಂಜುನಾಥ್, ದಿನೇಶ್ ಗುಂಡೂರಾವ್‌ಗೆ ಗುಂಡು ಹೊಡೆಯಬೇಕು. ಇವರಿಗೆಲ್ಲಾ ಗುಂಡು ಹಾಕಿದರೆ ಮಾತ್ರ ಸರಿ ಹೋಗುತ್ತದೆ. ಇವರೆಲ್ಲಾ ದೇಶದ್ರೋಹಿಗಳು, ಇಂತಹ ದೇಶದ್ರೋಹಿಗಳಿಗೆ ಗುಂಡು ಹಾಕಬೇಕು. ಎಷ್ಟು ವಿಮಾನ ಪತನ ಆದವು ಎಂದು ಯುದ್ಧದ ಬಗ್ಗೆ ಸಾಕ್ಷಿ ಕೇಳ್ತಾರೆ ಎಂದು ವಾಗ್ದಾಳಿ ನಡೆಸಿದರು.

ಜೂನಿಯರ್ ಕಾಂಗ್ರೆಸ್ ನಾಯಕರು ಮಾತ್ರ ಟೀಕೆ ಮಾಡುತ್ತಿದ್ದಾರೆ. ಸೀನಿಯರ್ ಖರ್ಗೆ ವಿಧಿ ಇಲ್ಲದೆ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ. ಹರಿಪ್ರಸಾದ್, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಅವರಂತಹ ಕೆಲವರಿಗೆ ಮಾತ್ರ ಎಲ್ಲಿ ಇದ್ದೇವೆ. ಏನು ಮಾಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಹೌದೋ, ಅಲ್ವೋ ಎಂದೇ ಗೊತ್ತಾಗುತ್ತಿಲ್ಲ. ಇವರ ಬಗ್ಗೆ ಕಾಂಗ್ರೆಸ್‌ನವರಿಂದಲೇ ಟೀಕೆ ಕೇಳಿಬರುತ್ತಿದೆ ಎಂದರು.

ಪ್ರೂಫ್ ಕೇಳೋಕೆ ಪ್ರಿಯಾಂಕ್ ಹಾಗೂ ಲಾಡ್ ಯಾರು? ಇವರಿಗೆ ಆಪರೇಷನ್ ಸಿಂಧೂರದ ಬಗ್ಗೆ ಏನು ಪ್ರೂಫ್ ಕೊಡಬೇಕು. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲಾ ಪಕ್ಷದ ಸಭೆಗೆ ಹೋಗಿದ್ದಾರೆ. ಅವರನ್ನೇ ಕೇಳಲಿ ಇವರು. ಅವರು ಸಾಕ್ಷಿ ಕೊಟ್ಟೇ ಕೊಡ್ತಾರೆ ಎಂದು ಆಕ್ರೋಶ ಹೊರಹಾಕಿದರು.

 

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

11 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

12 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

12 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

12 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

15 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

15 hours ago