ವಿಜಯಪುರ: ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು.
ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಕೊತ್ತೂರು ಮಂಜುನಾಥ್, ದಿನೇಶ್ ಗುಂಡೂರಾವ್ಗೆ ಗುಂಡು ಹೊಡೆಯಬೇಕು. ಇವರಿಗೆಲ್ಲಾ ಗುಂಡು ಹಾಕಿದರೆ ಮಾತ್ರ ಸರಿ ಹೋಗುತ್ತದೆ. ಇವರೆಲ್ಲಾ ದೇಶದ್ರೋಹಿಗಳು, ಇಂತಹ ದೇಶದ್ರೋಹಿಗಳಿಗೆ ಗುಂಡು ಹಾಕಬೇಕು. ಎಷ್ಟು ವಿಮಾನ ಪತನ ಆದವು ಎಂದು ಯುದ್ಧದ ಬಗ್ಗೆ ಸಾಕ್ಷಿ ಕೇಳ್ತಾರೆ ಎಂದು ವಾಗ್ದಾಳಿ ನಡೆಸಿದರು.
ಜೂನಿಯರ್ ಕಾಂಗ್ರೆಸ್ ನಾಯಕರು ಮಾತ್ರ ಟೀಕೆ ಮಾಡುತ್ತಿದ್ದಾರೆ. ಸೀನಿಯರ್ ಖರ್ಗೆ ವಿಧಿ ಇಲ್ಲದೆ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ. ಹರಿಪ್ರಸಾದ್, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಅವರಂತಹ ಕೆಲವರಿಗೆ ಮಾತ್ರ ಎಲ್ಲಿ ಇದ್ದೇವೆ. ಏನು ಮಾಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಹೌದೋ, ಅಲ್ವೋ ಎಂದೇ ಗೊತ್ತಾಗುತ್ತಿಲ್ಲ. ಇವರ ಬಗ್ಗೆ ಕಾಂಗ್ರೆಸ್ನವರಿಂದಲೇ ಟೀಕೆ ಕೇಳಿಬರುತ್ತಿದೆ ಎಂದರು.
ಪ್ರೂಫ್ ಕೇಳೋಕೆ ಪ್ರಿಯಾಂಕ್ ಹಾಗೂ ಲಾಡ್ ಯಾರು? ಇವರಿಗೆ ಆಪರೇಷನ್ ಸಿಂಧೂರದ ಬಗ್ಗೆ ಏನು ಪ್ರೂಫ್ ಕೊಡಬೇಕು. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲಾ ಪಕ್ಷದ ಸಭೆಗೆ ಹೋಗಿದ್ದಾರೆ. ಅವರನ್ನೇ ಕೇಳಲಿ ಇವರು. ಅವರು ಸಾಕ್ಷಿ ಕೊಟ್ಟೇ ಕೊಡ್ತಾರೆ ಎಂದು ಆಕ್ರೋಶ ಹೊರಹಾಕಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…