ಮಂಗಳೂರು: ಆಪ್ತರ ವಲಯದಲ್ಲಿ ನನ್ನ ಅಭಿಪ್ರಾಯ ಹಂಚಿಕೊಂಡಿದ್ದು, ನನ್ನ ಜೊತೆಗಿರುವ ಆಪ್ತರೇ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸರ್ಕಾರದ ಅವಧಿಯ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಮೈಸೂರಿನ ಆಪ್ತರ ಜೊತೆ ಮಾತನಾಡಿದ್ದು, ನನ್ನನ್ನು ಭೇಟಿ ಮಾಡಲು ಬಂದ ಆಪ್ತರೊಂದಿಗೆ ನಾನು ಅಭಿಪ್ರಾಯ ಹಂಚಿಕೊಂಡಿದ್ದೆ. ಆದರೆ ಅದನ್ನು ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ನೀಡಿ ವೈರಲ್ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಕುರಿತು ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಆದರೆ ವಿವಾದವನ್ನು ಉಂಟು ಮಾಡಲು ಈ ರೀತಿ ಮಾಡಿದ್ದಾರೆ. ಸರ್ಕಾರದ ಕುರಿತು ಉದ್ದೇಶ ಪೂರ್ವಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಹೇಳಿದ್ದೇನು: ಸಿದ್ದರಾಮಯ್ಯ ಅವರ ಹೇಳಿಕೆ ವಿಡಿಯೋ ಮಂಗಳವಾರವಷ್ಟೇ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವ್ಯಕ್ತಿಯೊಬ್ಬರೊಂದಿಗೆ ಮಾತುಕತೆ ನಡೆಸುತ್ತಿದ್ದು, ಈ ವೇಳೆ ವ್ಯಕ್ತಿ ಸರ್ಕಾರದ ಅವಧಿಯ ಕುರಿತು ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆಯ ಮುಗಿದ ಬಳಿಕ ಸರ್ಕಾರದ ಕುರಿತು ಏನಾಗುತ್ತೇ ಎಂದು ನೋಡೋಣ. ಪಾರ್ಲಿಮೆಂಟ್ ಎಲೆಕ್ಷನ್ ವರೆಗೂ ಸರ್ಕಾರ ಇರುತ್ತೆ. ಪಾರ್ಲಿಮೆಂಟ್ ಎಲೆಕ್ಷನ್ ಬಳಿಕ ಏನು ಬೆಳವಣಿಗೆ ಆಗುತ್ತೆ ನೋಡೋಣ ಎಂದು ಹೇಳಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…