ಉಡುಪಿ

ಆಪ್ತ ಸಹಾಯಕನಿಗೆ ಸಂಬಳ ಕೊಡದೆ ಸತಾಯಿಸುತ್ತಿರುವ ಕಾಂಗ್ರೆಸ್‍ನ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್

ಉಡುಪಿ: ರಾಜ್ಯಸಭಾ ಸದಸ್ಯ, ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ತಮ್ಮ ಆಪ್ತ ಸಹಾಯಕನಿಗೆ ಲಕ್ಷಗಟ್ಟಲೆ ಸಂಬಳ ಬಾಕಿಯಿಟ್ಟಿದ್ದಾರಂತೆ. ವರ್ಷಗಟ್ಟಲೆ ಕಾದರೂ ಸಂಬಳ ಕೊಟ್ಟಿಲ್ವಂತೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ರೂ ಆಸ್ಕರ್ ಪರ್ಸ್ ಬಿಚ್ಚಿಲ್ವಂತೆ.

ಆಸ್ಕರ್ ಆಪ್ತ ಸಹಾಯಕ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಮಾಡಲಿದ್ದಾರೆ. ಆಸ್ಕರ್ ಅವರ ಮಣಿಪಾಲ ವರ್ಕ್ ಶಾಪ್ ನಲ್ಲಿ ನಂತರ ಮನೆಯಲ್ಲಿ 1972ರಿಂದ 1987ರವರಗೆ ಉಡುಪಿಯ ಅಂಬಲ್ಪಾಡಿಯ ಗೋಪಾಲ ಪೂಜಾರಿ ಕೆಲಸಕ್ಕಿದ್ದರು. ಮೊದಲು ಸೂಪರ್ ವೈಸರ್ ಆಗಿದ್ದ ಗೋಪಾಲ್ ಪೂಜಾರಿ ನಂತರ ಆಪ್ತ ಸಹಾಯಕರಾದರು. ಈ ಸಂದರ್ಭದಲ್ಲಿ ಸಂಬಳ ನೀಡಿಲ್ಲ. ಆ ಮೇಲೆ ಸಂಬಳ ಕೊಡುವುದಾಗಿ ಹೇಳುತ್ತಾ ದಿನ ದೂಡಿದರು.

ಈವರೆಗೆ ನನಗೆ 6 ಲಕ್ಷ 10 ಸಾವಿರ ರೂಪಾಯಿ ಸಂಬಳದ ಹಣ ಕೊಡೋದು ಬಾಕಿಯಿದೆ ಅಂತ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. 1995ರಲ್ಲಿ ಸೋನಿಯಾಗಾಂಧಿಗೆ ದೂರು ನೀಡಿದ್ದೆ. ಸೋನಿಯಾಗಾಂಧಿ ಆಸ್ಕರ್ ಅವರನ್ನು ಕರೆದು ಸಂಬಳ ಕೊಡಿ ಎಂದು ತಾಕೀತು ಮಾಡಿದ್ದರು. ಆದ್ರೂ ಅವರು ಹಣ ಕೊಡಲಿಲ್ಲ. ಮಗಳ ಮದುವೆ ಸಂದರ್ಭದಲ್ಲಾದ್ರೂ ಕೊಡಬಹುದು ಎಂದು ಕಾದು ಈಗ ಮೋಸ ಹೋಗಿದ್ದೇನೆ ಎಂದು ಅವರು ಹೇಳಿದರು.

ಕಾರ್ಮಿಕ ಇಲಾಖೆ, ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ರೂ ಪ್ರಯೋಜನವಿಲ್ಲ ಎಂದು ಗೋಪಾಲ್ ಪೂಜಾರಿ ದೂರಿದ್ದಾರೆ. ಏಪ್ರಿಲ್ 1 ರವರೆಗೆ ಗಡುವು ನೀಡಿರುವ ಅವರು, ಏಪ್ರಿಲ್ 2ರಂದು ಉಪವಾಸ ಕೂರುವುದಾಗಿ ಹೇಳಿದ್ದಾರೆ. ಗೋಪಾಲ್ ಪೂಜಾರಿ ಪತ್ನಿ ಚಂಚಲ ಅನಾರೋಗ್ಯದಿಂದ ಬಳಲುತ್ತಿದ್ದು ಸಂಬಂಧಿಕರಿಂದ ಸಹಾಯ ಯಾಚಿಸುವಂತಾಗಿದೆ ಎಂದು ಹೇಳಿದರು.

15 ದಿನದ ಹಿಂದೆ ಆಸ್ಕರ್ ಗೆ ಪತ್ರ ಬರೆದಿದ್ದೆ. ಅದಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಕೊಟ್ಟ ಹಿಂಬರವನ್ನೂ ಲಗತ್ತಿಸಿದ್ದೆ. ಇದಕ್ಕೂ ಅವರಿಂದ ಉತ್ತರ ಬಂದಿಲ್ಲ ಎಂದು ಹೇಳಿದರು. ನಿಗಮ ಮಂಡಳಿಗೆ ನೇಮಕ ಮಾಡುತ್ತೇನೆ ಎಂದು ಒಂದು ಬಾರಿ ಆಸ್ಕರ್ ಭರವಸೆ ಕೊಟ್ಟಿದ್ದರು ಎಂಬುದನ್ನು ಗೋಪಾಲ್ ಪೂಜಾರಿ ನೆನಪಿಸಿಕೊಂಡರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago