ಉಡುಪಿ

ಆಪ್ತ ಸಹಾಯಕನಿಗೆ ಸಂಬಳ ಕೊಡದೆ ಸತಾಯಿಸುತ್ತಿರುವ ಕಾಂಗ್ರೆಸ್‍ನ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್

ಉಡುಪಿ: ರಾಜ್ಯಸಭಾ ಸದಸ್ಯ, ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ತಮ್ಮ ಆಪ್ತ ಸಹಾಯಕನಿಗೆ ಲಕ್ಷಗಟ್ಟಲೆ ಸಂಬಳ ಬಾಕಿಯಿಟ್ಟಿದ್ದಾರಂತೆ. ವರ್ಷಗಟ್ಟಲೆ ಕಾದರೂ ಸಂಬಳ ಕೊಟ್ಟಿಲ್ವಂತೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ರೂ ಆಸ್ಕರ್ ಪರ್ಸ್ ಬಿಚ್ಚಿಲ್ವಂತೆ.

ಆಸ್ಕರ್ ಆಪ್ತ ಸಹಾಯಕ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಮಾಡಲಿದ್ದಾರೆ. ಆಸ್ಕರ್ ಅವರ ಮಣಿಪಾಲ ವರ್ಕ್ ಶಾಪ್ ನಲ್ಲಿ ನಂತರ ಮನೆಯಲ್ಲಿ 1972ರಿಂದ 1987ರವರಗೆ ಉಡುಪಿಯ ಅಂಬಲ್ಪಾಡಿಯ ಗೋಪಾಲ ಪೂಜಾರಿ ಕೆಲಸಕ್ಕಿದ್ದರು. ಮೊದಲು ಸೂಪರ್ ವೈಸರ್ ಆಗಿದ್ದ ಗೋಪಾಲ್ ಪೂಜಾರಿ ನಂತರ ಆಪ್ತ ಸಹಾಯಕರಾದರು. ಈ ಸಂದರ್ಭದಲ್ಲಿ ಸಂಬಳ ನೀಡಿಲ್ಲ. ಆ ಮೇಲೆ ಸಂಬಳ ಕೊಡುವುದಾಗಿ ಹೇಳುತ್ತಾ ದಿನ ದೂಡಿದರು.

ಈವರೆಗೆ ನನಗೆ 6 ಲಕ್ಷ 10 ಸಾವಿರ ರೂಪಾಯಿ ಸಂಬಳದ ಹಣ ಕೊಡೋದು ಬಾಕಿಯಿದೆ ಅಂತ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. 1995ರಲ್ಲಿ ಸೋನಿಯಾಗಾಂಧಿಗೆ ದೂರು ನೀಡಿದ್ದೆ. ಸೋನಿಯಾಗಾಂಧಿ ಆಸ್ಕರ್ ಅವರನ್ನು ಕರೆದು ಸಂಬಳ ಕೊಡಿ ಎಂದು ತಾಕೀತು ಮಾಡಿದ್ದರು. ಆದ್ರೂ ಅವರು ಹಣ ಕೊಡಲಿಲ್ಲ. ಮಗಳ ಮದುವೆ ಸಂದರ್ಭದಲ್ಲಾದ್ರೂ ಕೊಡಬಹುದು ಎಂದು ಕಾದು ಈಗ ಮೋಸ ಹೋಗಿದ್ದೇನೆ ಎಂದು ಅವರು ಹೇಳಿದರು.

ಕಾರ್ಮಿಕ ಇಲಾಖೆ, ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ರೂ ಪ್ರಯೋಜನವಿಲ್ಲ ಎಂದು ಗೋಪಾಲ್ ಪೂಜಾರಿ ದೂರಿದ್ದಾರೆ. ಏಪ್ರಿಲ್ 1 ರವರೆಗೆ ಗಡುವು ನೀಡಿರುವ ಅವರು, ಏಪ್ರಿಲ್ 2ರಂದು ಉಪವಾಸ ಕೂರುವುದಾಗಿ ಹೇಳಿದ್ದಾರೆ. ಗೋಪಾಲ್ ಪೂಜಾರಿ ಪತ್ನಿ ಚಂಚಲ ಅನಾರೋಗ್ಯದಿಂದ ಬಳಲುತ್ತಿದ್ದು ಸಂಬಂಧಿಕರಿಂದ ಸಹಾಯ ಯಾಚಿಸುವಂತಾಗಿದೆ ಎಂದು ಹೇಳಿದರು.

15 ದಿನದ ಹಿಂದೆ ಆಸ್ಕರ್ ಗೆ ಪತ್ರ ಬರೆದಿದ್ದೆ. ಅದಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಕೊಟ್ಟ ಹಿಂಬರವನ್ನೂ ಲಗತ್ತಿಸಿದ್ದೆ. ಇದಕ್ಕೂ ಅವರಿಂದ ಉತ್ತರ ಬಂದಿಲ್ಲ ಎಂದು ಹೇಳಿದರು. ನಿಗಮ ಮಂಡಳಿಗೆ ನೇಮಕ ಮಾಡುತ್ತೇನೆ ಎಂದು ಒಂದು ಬಾರಿ ಆಸ್ಕರ್ ಭರವಸೆ ಕೊಟ್ಟಿದ್ದರು ಎಂಬುದನ್ನು ಗೋಪಾಲ್ ಪೂಜಾರಿ ನೆನಪಿಸಿಕೊಂಡರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

17 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

17 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

18 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

20 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

20 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

20 hours ago