ಹುಬ್ಬಳ್ಳಿ: ಹೃದಯಾಘಾತದಿಂದ ಮೃತಪಟ್ಟ ಸ್ನೇಹಿತನ ಪಾರ್ಥಿವ ಶರೀರ ಕಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರಿಟ್ಟಿದ್ದಾರೆ.
ಬಾಲ್ಯದಿಂದಲೂ ಆಪ್ತ ಸ್ನೇಹಿತ ಹಾಗೂ ಅಳಿಯನಾಗಿದ್ದ ರಾಜು ಪಾಟೀಲ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಇಂದು ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಸ್ನೇಹಿತನ ಅಂತಿಮ ದರ್ಶನ ಪಡೆದು ಬಿಕ್ಕಿ ಬಿಕ್ಕಿ ಅತ್ತರು.
ಹುಬ್ಬಳ್ಳಿಯ ಶಕ್ತಿನಗರದ ನಿವಾಸಿಯಾಗಿದ್ದ ರಾಜು ಪಾಟೀಲ ಮೃತಪಟ್ಟ ಪರಿಣಾಮ ಬಸವರಾಜ ಬೊಮ್ಮಾಯಿ ದುಃಖ ತೃಪ್ತರಾಗಿದ್ದು, ಅವರ ಈಡೀ ಕುಟುಂಬ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿ ಕಣ್ಣೀರು ಸುರಿಸಿದರು.
ಪತ್ನಿ, ಪುತ್ರ, ಪುತ್ರಿ ಸಹೋದರಿಯೊಂದಿಗೆ ಹುಬ್ಬಳ್ಳಿಗೆ ಆಗಮಿಸಿರುವ ಬೊಮ್ಮಾಯಿ ರಾಜು ಪಾಟೀಲ ಪತ್ನಿ ಹಾಗೂ ಕುಟುಂಬಸ್ಥರನ್ನು ಸಮಾಧಾನಪಡಿಸಿದರು. ಸಂಜೆ ನಡೆಯುವ ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಬೊಮ್ಮಾಯಿ ಭಾಗವಹಿಸಲಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]