Featured

ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ ವಕೀಲ ಜಗದೀಶ್ – Vishwanews24

ಇನ್ಮುಂದೆ ನನಗೂ, ಆದ್ಮಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ..

ಬೆಂಗಳೂರು, : ಕೆಲವು ತಿಂಗಳುಗಳ ಹಿಂದೆಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದ ವಕೀಲ ಜಗದೀಶ್ ಕೆ.ಎನ್. ಇಂದು (ಗುರುವಾರ) ಪಕ್ಷಕ್ಕೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ವಕೀಲ ಜಗದೀಶ್ ಕೆ.ಎನ್, “ಆಮ್ ಆದ್ಮಿ ಪಕ್ಷಕ್ಕೆ ಸೇರಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.

ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಕರ್ನಾಟಕ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರಿಗೆ ತಲುಪಿಸಿದ್ದೇನೆ,” ಎಂದರು.

“ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳಿಗೂ ಈ ವಿಷಯ ಹೇಳುತ್ತಿದ್ದೇನೆ. ನನ್ನ ರಾಜೀನಾಮೆ ತಕ್ಷಣದಿಂದ ಕಾರ್ಯರೂಪಕ್ಕೆ ಬರಲಿದ್ದು, ಇನ್ಮುಂದೆ ನನಗೂ, ಆದ್ಮಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ,” ಎಂದು ವಿಡಿಯೋ ಹೇಳಿಕೆಯಲ್ಲಿ ವಕೀಲ ಜಗದೀಶ್ ಕೆ.ಎನ್ ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ “ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್‌ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ,” ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್‌. ಜಗದೀಶ್ ಮಹಾದೇವ್ ಹೇಳಿದ್ದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago