ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣರವರು ಆಮ್ ಆದ್ಮಿ ಪಾರ್ಟಿಗೆಗುರುವಾರ ಸೇರ್ಪಡೆಯಾದರು. ಹೊಟೇಲ್ ಪರಾಗ್ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್ ಕೃಷ್ಣ, ‘ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧಿಸಿ ತೋರಿಸಿರುವ ಎಎಪಿಯು ಈಗ ಪಂಜಾಬ್ನಲ್ಲೂ ಮೋಡಿ ಮಾಡುತ್ತಿದೆ. ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್ ಆದ್ಮಿ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಎಎಪಿಯನ್ನು ಬಳಸಿಕೊಂಡು ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶಿಸಬೇಕು’ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಸಂಚಿತ್ ಸೆಹ್ವಾನಿ , ಜಗದೀಶ್ ವಿ .ಸದಂ , ಪುರುಷೋತ್ತಮ್ ,ಸುರೇಶ್ ರಾಥೋಡ್, ಉಷಾ ಮೋಹನ್, ಚನ್ನಪ್ಪಗೌಡ ನೆಲ್ಲೂರು, ಜ್ಯೋತಿಷ್ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…