Featured

ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂ ಶುಪಾಲರನ್ನು ನೇರ ನೇಮಕಾತಿ: ಡಾ.ಸಿ.ಎನ್.ಅಶ್ವತ್ಥನಾರಾಯಣ- vishwanews24

ಬೆಂಗಳೂರು: ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ರಾಷ್ಟ್ರೀ ಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರಕಾರವು ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂ ಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾ ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಶನ ಇಲ್ಲದೆಯೇ ಲಿಖಿತ ಪರೀಕ್ಷೆ ಮೂಲಕವೇ ಇಷ್ಟೂ ಹುದ್ದೆಗಳನ್ನು ತುಂಬಲಾಗುತ್ತಿದೆ ಎಂದರು. ಈ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಆರು ತಿಂಗಳ ಒಳಗಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದಲ್ಲದೆ, ಎಲ್ಲ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ. ಅರ್ಹತೆ ಆಧಾರದ ಮೇಲೆಯೇ ಇಡೀ ನೇಮಕಾತಿ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 2009ರ ನಂತರ ಪ್ರಾಂ ಶು ಪಾಲರನ್ನು ನೇಮಕಾತಿ ಮಾಡಿರಲಿಲ್ಲ. ಇದಕ್ಕೆ 55 ವರ್ಷ ವಯೋಮಿತಿ ಇದೆ. ಅದೇ 2017ರ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕವೂ ಆಗಿರಲಿಲ್ಲ ಎಂದ ಅವರು, ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ 500 ಅಂಕಕ್ಕೆ ನಡೆಯುತ್ತದೆ. (ಕನ್ನಡ 100, ಇಂಗ್ಲಿಷ್ 100, ಜಿಕೆ 50 ಆಯ್ಕೆ ವಿಷಯಗಳಿಗೆ 250 ಅಂಕ ಇರುತ್ತದೆ.) ಪ್ರಾಂ ಶುಪಾಲರ ಆಯ್ಕೆ ಪರೀಕ್ಷೆ 100 ಅಂಕ ಇರುತ್ತದೆ. ಎಲ್ಲ ಪ್ರಶ್ನೆಗಳು ಬಹುಆಯ್ಕೆ ಮಾದರಿಯಲ್ಲಿ ಇರುತ್ತವೆ. ಪ್ರಾಥಮಿಕ ಅರ್ಹತೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿರುತ್ತದೆ ಎಂದು ಅವರು ಮಾಹಿತಿ ನೀಡಿದರು. ಅರ್ಹತೆಯನ್ನು ಹೊರತುಪಡಿಸಿ ಬೇರೆ ಯಾವ ಮಾನದಂಡವೂ ಈ ನೇಮಕಾತಿಯಲ್ಲಿ ಇರುವುದಿಲ್ಲ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇ ಶದಿಂದ ಈ ಕ್ರಮ ವಹಿಸಲಾಗಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

14 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

15 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

15 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

15 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

15 hours ago