Featured

ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂ ಶುಪಾಲರನ್ನು ನೇರ ನೇಮಕಾತಿ: ಡಾ.ಸಿ.ಎನ್.ಅಶ್ವತ್ಥನಾರಾಯಣ- vishwanews24

ಬೆಂಗಳೂರು: ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ರಾಷ್ಟ್ರೀ ಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರಕಾರವು ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂ ಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾ ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಶನ ಇಲ್ಲದೆಯೇ ಲಿಖಿತ ಪರೀಕ್ಷೆ ಮೂಲಕವೇ ಇಷ್ಟೂ ಹುದ್ದೆಗಳನ್ನು ತುಂಬಲಾಗುತ್ತಿದೆ ಎಂದರು. ಈ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಆರು ತಿಂಗಳ ಒಳಗಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದಲ್ಲದೆ, ಎಲ್ಲ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ. ಅರ್ಹತೆ ಆಧಾರದ ಮೇಲೆಯೇ ಇಡೀ ನೇಮಕಾತಿ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 2009ರ ನಂತರ ಪ್ರಾಂ ಶು ಪಾಲರನ್ನು ನೇಮಕಾತಿ ಮಾಡಿರಲಿಲ್ಲ. ಇದಕ್ಕೆ 55 ವರ್ಷ ವಯೋಮಿತಿ ಇದೆ. ಅದೇ 2017ರ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕವೂ ಆಗಿರಲಿಲ್ಲ ಎಂದ ಅವರು, ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ 500 ಅಂಕಕ್ಕೆ ನಡೆಯುತ್ತದೆ. (ಕನ್ನಡ 100, ಇಂಗ್ಲಿಷ್ 100, ಜಿಕೆ 50 ಆಯ್ಕೆ ವಿಷಯಗಳಿಗೆ 250 ಅಂಕ ಇರುತ್ತದೆ.) ಪ್ರಾಂ ಶುಪಾಲರ ಆಯ್ಕೆ ಪರೀಕ್ಷೆ 100 ಅಂಕ ಇರುತ್ತದೆ. ಎಲ್ಲ ಪ್ರಶ್ನೆಗಳು ಬಹುಆಯ್ಕೆ ಮಾದರಿಯಲ್ಲಿ ಇರುತ್ತವೆ. ಪ್ರಾಥಮಿಕ ಅರ್ಹತೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿರುತ್ತದೆ ಎಂದು ಅವರು ಮಾಹಿತಿ ನೀಡಿದರು. ಅರ್ಹತೆಯನ್ನು ಹೊರತುಪಡಿಸಿ ಬೇರೆ ಯಾವ ಮಾನದಂಡವೂ ಈ ನೇಮಕಾತಿಯಲ್ಲಿ ಇರುವುದಿಲ್ಲ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇ ಶದಿಂದ ಈ ಕ್ರಮ ವಹಿಸಲಾಗಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago