ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
“ಹಿಂದೂ ಧರ್ಮವೂ ನೋಂದಣಿಯಾಗಿಲ್ಲ” ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಎಕ್ಸ್ ಪೋಸ್ಟ್ ಮಾಡಿರುವ ಅವರು, ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ತತ್ವಶಾಸ್ತ್ರ ಮತ್ತು ವೈವಿಧ್ಯತೆಯನ್ನು ಹೊಂದಿರುವ ಹಿಂದೂ ಧರ್ಮವನ್ನು ಒಂದು ನಿರ್ದಿಷ್ಟ ಸಂಘಟನೆಯ ಮಟ್ಟಕ್ಕೆ ಇಳಿಸಿ ನೋಡುವುದು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಅವಮಾನ ಎಂದು ಹೇಳಿದ್ದಾರೆ.
ಇದನ್ನೂ ಓದಿ :
ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ. ಅದು ಆರ್ಎಸ್ಎಸ್ಗಿಂತಲೂ ದೊಡ್ಡದು, ವಿಶಾಲವಾದುದು ಮತ್ತು ಎಲ್ಲರನ್ನು ಒಳಗೊಳ್ಳುವ ನಾಗರಿಕತಾ ಪರಂಪರೆ. ವಿವಾದಾತ್ಮಕ ಹಿನ್ನೆಲೆ ಹೊಂದಿರುವ ಒಂದು ಸಂಘಟನೆಯನ್ನು ಸಂಪೂರ್ಣ ಹಿಂದೂ ಸಮಾಜದ ಪ್ರತಿನಿಧಿಯಂತೆ ಬಿಂಬಿಸುವುದು ಸರಿಯೇ? ಎಂದು ಅವರು ಪ್ರಶ್ನಿಸಿದ್ದಾರೆ.
ಹಿಂದೂತ್ವದ ಬಗ್ಗೆ ದಿನವೂ ದೊಡ್ಡ ದೊಡ್ಡ ಭಾಷಣ ಮಾಡುವ ಬಿಜೆಪಿಯ ನಾಯಕರು ಮತ್ತು ಸ್ವಯಂ ಘೋಷಿತ ‘ಹಿಂದೂ ರಕ್ಷಕರು’ ಈಗ ಏನು ಹೇಳುತ್ತಾರೆ? ಹಿಂದೂ ಧರ್ಮ ಮತ್ತು ಆರ್ಎಸ್ಎಸ್ ಒಂದೇ ಎಂದು ಹೇಳುವುದನ್ನು ಅವರು ಒಪ್ಪುತ್ತಾರೆಯೇ? ಎಂದು ಬಿ.ಕೆ. ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…