ಆರೆಸ್ಸೆಸ್ ಒಂದು ದೇಶಪ್ರೇಮಿ ಸಂಘಟನೆಯಾಗಿದೆ, ದೇಶ ನಿರ್ಮಾಣದಲ್ಲಿ ಮುಸ್ಲಿಮರ ಕೊಡುಗೆ ಶೂನ್ಯ, ಅವರ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಿಲ್ಲ : ರೇಣುಕಾಚಾರ್ಯ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಬಿಜೆಪಿಗೆ ವೋಟು ಹಾಕದ ಮುಸ್ಲಿಮರು ದೇಶ ವಿರೋಧಿಗಳಾಗಿದ್ದು, ಅವರ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಿಲ್ಲ ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ಧಾರೆ.

ದಾವಣಗೆರೆಯಲ್ಲಿರುವ ತಮ್ಮ ಸ್ವಕ್ಷೇತ್ರ ಹೊನ್ನಾಳಿಯಲ್ಲಿ ಸಿಎಎ ಪರ ಸಮಾವೇಶವನ್ನುದ್ದೇಶಿಸಿ ಮಾತನಾಡುವ ವೇಳೆ ಅವರು ಈ ವಿವಾದಾತ್ಮಕ ಮಾತುಗಳನ್ನಾಡಿದ್ಧಾರೆ.

“ನಾನು ಮುಸಲ್ಮಾನರಿಗೆ ಎಚ್ಚರಿಕೆ ನೀಡುತ್ತೇನೆ. ಅವರ ಪ್ರದೇಶಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವುದಿಲ್ಲ. ಮುಸ್ಲಿಮರು ದೇಶಪ್ರೇಮಿಗಳಲ್ಲ. ಅವರು ಬಿಜೆಪಿಗೆ ವೋಟು ಹಾಕುವುದಿಲ್ಲ. 2018ರ ವಿಧಾನಸಭಾ ಚುನಾವಣೆಯಲ್ಲೂ ಅವರು ನನಗೆ ವೋಟು ಹಾಕಲಿಲ್ಲ. ಮುಂದಿನ ಚುನಾವಣೆಯಲ್ಲಿ ನಾನು ಅವರಲ್ಲಿ ಮತ ಯಾಚಿಸುವುದಿಲ್ಲ” ಎಂದು ಎಂ.ಪಿ. ರೇಣುಕಾಚಾರ್ಯ ಟೀಕಿಸಿದ್ಧಾರೆ.

 

ಮುಸ್ಲಿಮರು ತಮ್ಮ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಸಂಗ್ರಹ ಮಾಡುತ್ತಾರೆ. ದೇಶ ನಿರ್ಮಾಣದಲ್ಲಿ ಅವರ ಕೊಡುಗೆ ಶೂನ್ಯ ಇದೆ ಎಂದು ಹೇಳಿದ ಅವರು, ಹೊನ್ನಾಳಿ ಕ್ಷೇತ್ರವನ್ನು ಸಂಪೂರ್ಣವಾಗಿ ಕೇಸರೀಮಯ ಮಾಡುವುದಾಗಿ ಪಣ ತೊಟ್ಟಿದ್ಧಾರೆ.

ಆರೆಸ್ಸೆಸ್ ಸಂಘಟನೆಯನ್ನು ನಿಷೇಧಿಸಬೇಕೆಂಬ ಕೂಗು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಆರೆಸ್ಸೆಸ್ ಒಂದು ದೇಶಪ್ರೇಮಿ ಸಂಘಟನೆಯಾಗಿದೆ. ಯಾರಾದರೂ ಅದನ್ನು ಪ್ರಶ್ನಿಸಿದರೆ ನಾನು ಸುಮ್ಮನಿರುವುದಿಲ್ಲ. ಅವರಿಗೆ ತಕ್ಕ ಪಾಠ ಕಲಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292