ಬೆಂಗಳೂರು: ಬಿಜೆಪಿಗೆ ವೋಟು ಹಾಕದ ಮುಸ್ಲಿಮರು ದೇಶ ವಿರೋಧಿಗಳಾಗಿದ್ದು, ಅವರ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಿಲ್ಲ ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ಧಾರೆ.
ದಾವಣಗೆರೆಯಲ್ಲಿರುವ ತಮ್ಮ ಸ್ವಕ್ಷೇತ್ರ ಹೊನ್ನಾಳಿಯಲ್ಲಿ ಸಿಎಎ ಪರ ಸಮಾವೇಶವನ್ನುದ್ದೇಶಿಸಿ ಮಾತನಾಡುವ ವೇಳೆ ಅವರು ಈ ವಿವಾದಾತ್ಮಕ ಮಾತುಗಳನ್ನಾಡಿದ್ಧಾರೆ.
“ನಾನು ಮುಸಲ್ಮಾನರಿಗೆ ಎಚ್ಚರಿಕೆ ನೀಡುತ್ತೇನೆ. ಅವರ ಪ್ರದೇಶಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವುದಿಲ್ಲ. ಮುಸ್ಲಿಮರು ದೇಶಪ್ರೇಮಿಗಳಲ್ಲ. ಅವರು ಬಿಜೆಪಿಗೆ ವೋಟು ಹಾಕುವುದಿಲ್ಲ. 2018ರ ವಿಧಾನಸಭಾ ಚುನಾವಣೆಯಲ್ಲೂ ಅವರು ನನಗೆ ವೋಟು ಹಾಕಲಿಲ್ಲ. ಮುಂದಿನ ಚುನಾವಣೆಯಲ್ಲಿ ನಾನು ಅವರಲ್ಲಿ ಮತ ಯಾಚಿಸುವುದಿಲ್ಲ” ಎಂದು ಎಂ.ಪಿ. ರೇಣುಕಾಚಾರ್ಯ ಟೀಕಿಸಿದ್ಧಾರೆ.
ಮುಸ್ಲಿಮರು ತಮ್ಮ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಸಂಗ್ರಹ ಮಾಡುತ್ತಾರೆ. ದೇಶ ನಿರ್ಮಾಣದಲ್ಲಿ ಅವರ ಕೊಡುಗೆ ಶೂನ್ಯ ಇದೆ ಎಂದು ಹೇಳಿದ ಅವರು, ಹೊನ್ನಾಳಿ ಕ್ಷೇತ್ರವನ್ನು ಸಂಪೂರ್ಣವಾಗಿ ಕೇಸರೀಮಯ ಮಾಡುವುದಾಗಿ ಪಣ ತೊಟ್ಟಿದ್ಧಾರೆ.
ಆರೆಸ್ಸೆಸ್ ಸಂಘಟನೆಯನ್ನು ನಿಷೇಧಿಸಬೇಕೆಂಬ ಕೂಗು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಆರೆಸ್ಸೆಸ್ ಒಂದು ದೇಶಪ್ರೇಮಿ ಸಂಘಟನೆಯಾಗಿದೆ. ಯಾರಾದರೂ ಅದನ್ನು ಪ್ರಶ್ನಿಸಿದರೆ ನಾನು ಸುಮ್ಮನಿರುವುದಿಲ್ಲ. ಅವರಿಗೆ ತಕ್ಕ ಪಾಠ ಕಲಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ಧಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…