ಉಡುಪಿ: ಆರೆಸ್ಸೆಸ್ ನಿಷೇಧಿಸುವ ಸಂಬಂದ ಸಚಿವ ಪ್ರಿಯಾಂಕ ಖರ್ಗೆ ಅವರು ಅವರ ಅಭಿಪ್ರಾಯವನ್ನು ಸರಕಾರಕ್ಕೆ ಹೇಳಿದ್ದಾರೆ. ಅವರ ಅಭಿಪ್ರಾಯ ತಿಳಿಸುವ ಹಕ್ಕು ಅವರಿಗೆ ಖಂಡಿತವಾಗಿಯೂ ಇದೆ. ಮುಖ್ಯಮಂತ್ರಿಗಳು ಎಲ್ಲರ ಜತೆ ವಿಮರ್ಶಿಸಿ ತೀರ್ಮಾನ ತೆಗೆದುಕೊಳ್ಳಬಹುದು. ಆರೆಸ್ಸೆಸ್ ತನ್ನ ಹೆಸರಿನಂತೆ ರಾಷ್ಟ್ರೀಯ ಸೇವೆ ಮಾಡುತ್ತಿದೆ. ವ್ಯವಸ್ಥೆಯಲ್ಲಿ ಕೆಲವು ತಪ್ಪುಗಳಾಗುವುದು ಸಹಜ. ತಪ್ಪುಗಳು ಇದೆಯೋ ಇಲ್ಲವೋ ವಿಮರ್ಶಿಸಬೇಕು ಎಂದು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಒಬ್ಬರಿಗೆ ಸರಿ ಎಂದು ಕಂಡದ್ದು ಮತ್ತೊಬ್ಬರಿಗೆ ತಪ್ಪು ಎಂದೆನಿಸಬಹುದು. ತಪ್ಪುಗಳಿದ್ದರೆ ನಿವಾರಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಏನೇ ಆದರೂ ಆರೆಸ್ಸೆಸ್ ಸೇವಾ ಕಾರ್ಯ ಮುಂದುವರಿಯುತ್ತದೆ. ಸೇವಾಕಾರ್ಯ ಮಾಡುತ್ತಲೇ ಬೆಳೆದು ಬಂದಿದೆ. ಹೀಗಾಗಿ ಮುಖ್ಯಮಂತ್ರಿಗಳು ಎಲ್ಲರ ಜತೆ ಚರ್ಚಿಸಿ ಯೋಗ್ಯವಾದ ನಿರ್ಧಾರ ಕೈಗೊಳ್ಳಲಿ. ಯಾವುದೇ ವ್ಯವಸ್ಥೆಯಲ್ಲಿ ಲೋಪದೋಷಗಳು ಇದ್ದರೆ ಸರಿಪಡಿಸಲು ಗಮನ ಹರಿಸಬೇಕು. ಸಮಾಜಕ್ಕೆ ಆಗುವ ಲಾಭವನ್ನು ಮಾತ್ರ ಸರಕಾರ ಗಮನಿಸಬೇಕು. ನೂರು ವರ್ಷ ಪೂರೈಸಿರುವ ಆರೆಸ್ಸೆಸ್ ನಿಷೇಧ ಮಾಡುವುದು ಸರಿಯಲ್ಲ. ಸರಕಾರ ಎಲ್ಲ ವಿಷಯದಲ್ಲೂ ಲಾಭ ನಷ್ಟವನ್ನು ಗಮನಿಸಬೇಕು. ಮೂಗು ಸೋರುತ್ತಿದೆ ಎಂದು ಅದನ್ನು ಕಿತ್ತೆಸೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…