ಉಡುಪಿ: ಆರೆಸ್ಸೆಸ್ ನಿಷೇಧಿಸುವ ಸಂಬಂದ ಸಚಿವ ಪ್ರಿಯಾಂಕ ಖರ್ಗೆ ಅವರು ಅವರ ಅಭಿಪ್ರಾಯವನ್ನು ಸರಕಾರಕ್ಕೆ ಹೇಳಿದ್ದಾರೆ. ಅವರ ಅಭಿಪ್ರಾಯ ತಿಳಿಸುವ ಹಕ್ಕು ಅವರಿಗೆ ಖಂಡಿತವಾಗಿಯೂ ಇದೆ. ಮುಖ್ಯಮಂತ್ರಿಗಳು ಎಲ್ಲರ ಜತೆ ವಿಮರ್ಶಿಸಿ ತೀರ್ಮಾನ ತೆಗೆದುಕೊಳ್ಳಬಹುದು. ಆರೆಸ್ಸೆಸ್ ತನ್ನ ಹೆಸರಿನಂತೆ ರಾಷ್ಟ್ರೀಯ ಸೇವೆ ಮಾಡುತ್ತಿದೆ. ವ್ಯವಸ್ಥೆಯಲ್ಲಿ ಕೆಲವು ತಪ್ಪುಗಳಾಗುವುದು ಸಹಜ. ತಪ್ಪುಗಳು ಇದೆಯೋ ಇಲ್ಲವೋ ವಿಮರ್ಶಿಸಬೇಕು ಎಂದು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಒಬ್ಬರಿಗೆ ಸರಿ ಎಂದು ಕಂಡದ್ದು ಮತ್ತೊಬ್ಬರಿಗೆ ತಪ್ಪು ಎಂದೆನಿಸಬಹುದು. ತಪ್ಪುಗಳಿದ್ದರೆ ನಿವಾರಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಏನೇ ಆದರೂ ಆರೆಸ್ಸೆಸ್ ಸೇವಾ ಕಾರ್ಯ ಮುಂದುವರಿಯುತ್ತದೆ. ಸೇವಾಕಾರ್ಯ ಮಾಡುತ್ತಲೇ ಬೆಳೆದು ಬಂದಿದೆ. ಹೀಗಾಗಿ ಮುಖ್ಯಮಂತ್ರಿಗಳು ಎಲ್ಲರ ಜತೆ ಚರ್ಚಿಸಿ ಯೋಗ್ಯವಾದ ನಿರ್ಧಾರ ಕೈಗೊಳ್ಳಲಿ. ಯಾವುದೇ ವ್ಯವಸ್ಥೆಯಲ್ಲಿ ಲೋಪದೋಷಗಳು ಇದ್ದರೆ ಸರಿಪಡಿಸಲು ಗಮನ ಹರಿಸಬೇಕು. ಸಮಾಜಕ್ಕೆ ಆಗುವ ಲಾಭವನ್ನು ಮಾತ್ರ ಸರಕಾರ ಗಮನಿಸಬೇಕು. ನೂರು ವರ್ಷ ಪೂರೈಸಿರುವ ಆರೆಸ್ಸೆಸ್ ನಿಷೇಧ ಮಾಡುವುದು ಸರಿಯಲ್ಲ. ಸರಕಾರ ಎಲ್ಲ ವಿಷಯದಲ್ಲೂ ಲಾಭ ನಷ್ಟವನ್ನು ಗಮನಿಸಬೇಕು. ಮೂಗು ಸೋರುತ್ತಿದೆ ಎಂದು ಅದನ್ನು ಕಿತ್ತೆಸೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…