Featured

ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು : ಬಿ.ವೈ.ವಿಜಯೇಂದ್ರ  – vishwanews24

ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು : ಬಿ.ವೈ.ವಿಜಯೇಂದ್ರ

ಚಿತ್ರದುರ್ಗ: ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಶಾಸಕರು, ಹಿರಿಯ ಸಚಿವರು ಆರೆಸ್ಸೆಸ್ ಕುರಿತು ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು 100 ವರ್ಷಗಳನ್ನು ಪೂರೈಸಿದ ಈ ಶುಭ ಘಳಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಆಗಸ್ಟ್ 15ರಂದು ಕೆಂಪುಕೋಟೆ ಮೇಲೆ ಭಾಷಣ ಮಾಡುವಾಗ ಆರೆಸ್ಸೆಸ್ ಅನ್ನು ಪ್ರಶಂಸೆ ಮಾಡಿದ್ದರು ಎಂದು ಗಮನ ಸೆಳೆದರು.

ನಿಸ್ವಾರ್ಥವಾಗಿ ದೇಶವನ್ನು ಕಟ್ಟುವ ಮತ್ತು ಯುವಜನರಲ್ಲಿ ರಾಷ್ಟ್ರಭಕ್ತಿಯನ್ನು ಮೂಡಿಸುವ ಪ್ರಾಮಾಣಿಕ ಕೆಲಸವನ್ನು ಆರೆಸ್ಸೆಸ್ ಮಾಡುತ್ತ ಬಂದಿದೆ. ಕೇವಲ ಕರ್ನಾಟಕ, ಭಾರತವಷ್ಟೇ ಅಲ್ಲ; ಜಗತ್ತಿನ 40ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆರೆಸ್ಸೆಸ್ ಚಟುವಟಿಕೆ ನಡೆಯುತ್ತಿದೆ ಎಂದು ವಿವರಿಸಿದರು.

ಆರೆಸ್ಸೆಸ್ ಅನ್ನು ನಿಷೇಧಿಸುವುದು ಯಾರಿಂದಲೂ ಸಾಧ್ಯವಿಲ್ಲ; ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಹೆಚ್ಚಿನ ಅಸ್ತಿತ್ವ ಇಲ್ಲದ ಸಂದರ್ಭದಲ್ಲೂ ಆರೆಸ್ಸೆಸ್ ಅನ್ನು ನಿಷೇಧಿಸಿದ್ದ ಕಾಂಗ್ರೆಸ್ ಪಕ್ಷವು ಬಳಿಕ ನಿಷೇಧವನ್ನು ಹಿಂಪಡೆಯಬೇಕಾಯಿತು. ಈಗ ಬಿಜೆಪಿಯು ನರೇಂದ್ರ ಮೋದಿಜೀ ಅವರ ದಿಟ್ಟ ನಾಯಕತ್ವವನ್ನು ಹೊಂದಿದೆ. ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸರಕಾರವೂ ಇದೆ. ಇಂಥ ಸಂದರ್ಭದಲ್ಲಿ ಆರೆಸ್ಸೆಸ್ ನಿಷೇಧದ ಮಾತು ಮೂರ್ಖತನದ ಪರಮಾವಧಿ ಎಂದು ಟೀಕಿಸಿದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago