Featured

ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು : ಬಿ.ವೈ.ವಿಜಯೇಂದ್ರ  – vishwanews24

ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು : ಬಿ.ವೈ.ವಿಜಯೇಂದ್ರ

ಚಿತ್ರದುರ್ಗ: ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಶಾಸಕರು, ಹಿರಿಯ ಸಚಿವರು ಆರೆಸ್ಸೆಸ್ ಕುರಿತು ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು 100 ವರ್ಷಗಳನ್ನು ಪೂರೈಸಿದ ಈ ಶುಭ ಘಳಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಆಗಸ್ಟ್ 15ರಂದು ಕೆಂಪುಕೋಟೆ ಮೇಲೆ ಭಾಷಣ ಮಾಡುವಾಗ ಆರೆಸ್ಸೆಸ್ ಅನ್ನು ಪ್ರಶಂಸೆ ಮಾಡಿದ್ದರು ಎಂದು ಗಮನ ಸೆಳೆದರು.

ನಿಸ್ವಾರ್ಥವಾಗಿ ದೇಶವನ್ನು ಕಟ್ಟುವ ಮತ್ತು ಯುವಜನರಲ್ಲಿ ರಾಷ್ಟ್ರಭಕ್ತಿಯನ್ನು ಮೂಡಿಸುವ ಪ್ರಾಮಾಣಿಕ ಕೆಲಸವನ್ನು ಆರೆಸ್ಸೆಸ್ ಮಾಡುತ್ತ ಬಂದಿದೆ. ಕೇವಲ ಕರ್ನಾಟಕ, ಭಾರತವಷ್ಟೇ ಅಲ್ಲ; ಜಗತ್ತಿನ 40ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆರೆಸ್ಸೆಸ್ ಚಟುವಟಿಕೆ ನಡೆಯುತ್ತಿದೆ ಎಂದು ವಿವರಿಸಿದರು.

ಆರೆಸ್ಸೆಸ್ ಅನ್ನು ನಿಷೇಧಿಸುವುದು ಯಾರಿಂದಲೂ ಸಾಧ್ಯವಿಲ್ಲ; ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಹೆಚ್ಚಿನ ಅಸ್ತಿತ್ವ ಇಲ್ಲದ ಸಂದರ್ಭದಲ್ಲೂ ಆರೆಸ್ಸೆಸ್ ಅನ್ನು ನಿಷೇಧಿಸಿದ್ದ ಕಾಂಗ್ರೆಸ್ ಪಕ್ಷವು ಬಳಿಕ ನಿಷೇಧವನ್ನು ಹಿಂಪಡೆಯಬೇಕಾಯಿತು. ಈಗ ಬಿಜೆಪಿಯು ನರೇಂದ್ರ ಮೋದಿಜೀ ಅವರ ದಿಟ್ಟ ನಾಯಕತ್ವವನ್ನು ಹೊಂದಿದೆ. ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸರಕಾರವೂ ಇದೆ. ಇಂಥ ಸಂದರ್ಭದಲ್ಲಿ ಆರೆಸ್ಸೆಸ್ ನಿಷೇಧದ ಮಾತು ಮೂರ್ಖತನದ ಪರಮಾವಧಿ ಎಂದು ಟೀಕಿಸಿದರು.

Vishwa News 24

Recent Posts

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 hour ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

1 hour ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

23 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

24 hours ago