ಚಿತ್ರದುರ್ಗ: ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.
ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಶಾಸಕರು, ಹಿರಿಯ ಸಚಿವರು ಆರೆಸ್ಸೆಸ್ ಕುರಿತು ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು 100 ವರ್ಷಗಳನ್ನು ಪೂರೈಸಿದ ಈ ಶುಭ ಘಳಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಆಗಸ್ಟ್ 15ರಂದು ಕೆಂಪುಕೋಟೆ ಮೇಲೆ ಭಾಷಣ ಮಾಡುವಾಗ ಆರೆಸ್ಸೆಸ್ ಅನ್ನು ಪ್ರಶಂಸೆ ಮಾಡಿದ್ದರು ಎಂದು ಗಮನ ಸೆಳೆದರು.
ನಿಸ್ವಾರ್ಥವಾಗಿ ದೇಶವನ್ನು ಕಟ್ಟುವ ಮತ್ತು ಯುವಜನರಲ್ಲಿ ರಾಷ್ಟ್ರಭಕ್ತಿಯನ್ನು ಮೂಡಿಸುವ ಪ್ರಾಮಾಣಿಕ ಕೆಲಸವನ್ನು ಆರೆಸ್ಸೆಸ್ ಮಾಡುತ್ತ ಬಂದಿದೆ. ಕೇವಲ ಕರ್ನಾಟಕ, ಭಾರತವಷ್ಟೇ ಅಲ್ಲ; ಜಗತ್ತಿನ 40ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆರೆಸ್ಸೆಸ್ ಚಟುವಟಿಕೆ ನಡೆಯುತ್ತಿದೆ ಎಂದು ವಿವರಿಸಿದರು.
ಆರೆಸ್ಸೆಸ್ ಅನ್ನು ನಿಷೇಧಿಸುವುದು ಯಾರಿಂದಲೂ ಸಾಧ್ಯವಿಲ್ಲ; ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಹೆಚ್ಚಿನ ಅಸ್ತಿತ್ವ ಇಲ್ಲದ ಸಂದರ್ಭದಲ್ಲೂ ಆರೆಸ್ಸೆಸ್ ಅನ್ನು ನಿಷೇಧಿಸಿದ್ದ ಕಾಂಗ್ರೆಸ್ ಪಕ್ಷವು ಬಳಿಕ ನಿಷೇಧವನ್ನು ಹಿಂಪಡೆಯಬೇಕಾಯಿತು. ಈಗ ಬಿಜೆಪಿಯು ನರೇಂದ್ರ ಮೋದಿಜೀ ಅವರ ದಿಟ್ಟ ನಾಯಕತ್ವವನ್ನು ಹೊಂದಿದೆ. ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸರಕಾರವೂ ಇದೆ. ಇಂಥ ಸಂದರ್ಭದಲ್ಲಿ ಆರೆಸ್ಸೆಸ್ ನಿಷೇಧದ ಮಾತು ಮೂರ್ಖತನದ ಪರಮಾವಧಿ ಎಂದು ಟೀಕಿಸಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…