Featured

ಆರೆಸ್ಸೆಸ್ ಸೌಹಾರ್ದತೆ, ಭಾವೈಕ್ಯತೆಯ ದೊಡ್ಡ ಶತ್ರು  ಇದರ ವಿರುದ್ಧ ಎಲ್ಲರೂ ಒಂದಾಗಿ ಭಾರತ ದೇಶವನ್ನು ಉಳಿಸಬೇಕಾಗಿದೆ : ಬಿ.ಕೆ. ಹರಿಪ್ರಸಾದ್ -Vishwanews24

ಆರೆಸ್ಸೆಸ್ ಸೌಹಾರ್ದತೆ, ಭಾವೈಕ್ಯತೆಯ ದೊಡ್ಡ ಶತ್ರು  ಇದರ ವಿರುದ್ಧ ಎಲ್ಲರೂ ಒಂದಾಗಿ ಭಾರತ ದೇಶವನ್ನು ಉಳಿಸಬೇಕಾಗಿದೆ : ಬಿ.ಕೆ. ಹರಿಪ್ರಸಾದ್ -Vishwanews24

ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ “ಸಂಚುಗಾರ ಸಂಘ ಪರಿವಾರ” ಪುಸ್ತಕದ ವಿಮರ್ಶೆ ಮತ್ತು ಸಂವಾದ ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮಾತನಾಡಿ, ‘ಆರ್ ಎಸ್ ಎಸ್ ಹಾಗೂ ಸಂಘ ಪರಿವಾರ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಯ ದೊಡ್ಡ ಶತ್ರು. ಇದರ ವಿರುದ್ಧ ಎಲ್ಲರೂ ಒಂದಾಗಿ ಭಾರತ ದೇಶವನ್ನು ಉಳಿಸಬೇಕಾಗಿದೆ ಎಂದರು’.

ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ ಮಾತನಾಡಿ, ‘ಸಂಘ ಪರಿವಾರವನ್ನು ವಿರೋಧಿಸುವ ಧ್ವನಿಗಳು ಒಂದಾಗಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ‌. ನಮ್ಮ ದೇಶ ಭಾರತವನ್ನು ಉಳಿಸಬೇಕೆಂಬ ಉದ್ದೇಶವಿರುವವರು ಫ್ಯಾಸಿಸಂ ವಿರುದ್ಧದ ತಂತ್ರಗಾರಿಕೆ ಮಾಡಬೇಕಾಗಿದೆ. ಪ್ರಸ್ತುತ ಈ ದೇಶವನ್ನು ಸರಿಯಾಗಿ ತಿಳಿದುಕೊಂಡಂತಹ, ಧೈರ್ಯವಂತ ಮತ್ತು ನೈತಿಕತೆ ಇರುವ ನಾಯಕತ್ವದ ಅಗತ್ಯತೆಯಿದೆ. ಆ ನಾಯಕತ್ವದ ಮೂಲಕ ಹೊಸ ಬದಲಾವಣೆಯನ್ನು ನಾವು ಕಾಣಬೇಕಿದೆ ಎಂದರು.

ಮಂಗಳೂರು ವಿವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಪಟ್ಟಾಭಿರಾಮ ಸೋಮಯಾಜಿ ಹಾಗೂ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಇರ್ಷಾದ್ ಕಾವು ಮಾತನಾಡಿದರು. ವಿಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್, ಸಿಎಫ್ ಐ ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ಉಪಸ್ಥಿತರಿದ್ದರು.
ರಾಜ್ಯ ಸಮಿತಿ ಸದಸ್ಯ ಇಮ್ರಾನ್ ಪಿ.ಜೆ. ಸ್ವಾಗತಿಸಿದರು. ಸಮಿತಿ ಸದಸ್ಯ ರಿಯಾಝ್ ಕಡಂಬು ನಿರೂಪಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago