ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ “ಸಂಚುಗಾರ ಸಂಘ ಪರಿವಾರ” ಪುಸ್ತಕದ ವಿಮರ್ಶೆ ಮತ್ತು ಸಂವಾದ ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮಾತನಾಡಿ, ‘ಆರ್ ಎಸ್ ಎಸ್ ಹಾಗೂ ಸಂಘ ಪರಿವಾರ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಯ ದೊಡ್ಡ ಶತ್ರು. ಇದರ ವಿರುದ್ಧ ಎಲ್ಲರೂ ಒಂದಾಗಿ ಭಾರತ ದೇಶವನ್ನು ಉಳಿಸಬೇಕಾಗಿದೆ ಎಂದರು’.
ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ ಮಾತನಾಡಿ, ‘ಸಂಘ ಪರಿವಾರವನ್ನು ವಿರೋಧಿಸುವ ಧ್ವನಿಗಳು ಒಂದಾಗಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ನಮ್ಮ ದೇಶ ಭಾರತವನ್ನು ಉಳಿಸಬೇಕೆಂಬ ಉದ್ದೇಶವಿರುವವರು ಫ್ಯಾಸಿಸಂ ವಿರುದ್ಧದ ತಂತ್ರಗಾರಿಕೆ ಮಾಡಬೇಕಾಗಿದೆ. ಪ್ರಸ್ತುತ ಈ ದೇಶವನ್ನು ಸರಿಯಾಗಿ ತಿಳಿದುಕೊಂಡಂತಹ, ಧೈರ್ಯವಂತ ಮತ್ತು ನೈತಿಕತೆ ಇರುವ ನಾಯಕತ್ವದ ಅಗತ್ಯತೆಯಿದೆ. ಆ ನಾಯಕತ್ವದ ಮೂಲಕ ಹೊಸ ಬದಲಾವಣೆಯನ್ನು ನಾವು ಕಾಣಬೇಕಿದೆ ಎಂದರು.
ಮಂಗಳೂರು ವಿವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಪಟ್ಟಾಭಿರಾಮ ಸೋಮಯಾಜಿ ಹಾಗೂ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಇರ್ಷಾದ್ ಕಾವು ಮಾತನಾಡಿದರು. ವಿಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್, ಸಿಎಫ್ ಐ ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ಉಪಸ್ಥಿತರಿದ್ದರು.
ರಾಜ್ಯ ಸಮಿತಿ ಸದಸ್ಯ ಇಮ್ರಾನ್ ಪಿ.ಜೆ. ಸ್ವಾಗತಿಸಿದರು. ಸಮಿತಿ ಸದಸ್ಯ ರಿಯಾಝ್ ಕಡಂಬು ನಿರೂಪಿಸಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…