Featured

ಆರೆಸ್ಸೆಸ್ ಸೌಹಾರ್ದತೆ, ಭಾವೈಕ್ಯತೆಯ ದೊಡ್ಡ ಶತ್ರು  ಇದರ ವಿರುದ್ಧ ಎಲ್ಲರೂ ಒಂದಾಗಿ ಭಾರತ ದೇಶವನ್ನು ಉಳಿಸಬೇಕಾಗಿದೆ : ಬಿ.ಕೆ. ಹರಿಪ್ರಸಾದ್ -Vishwanews24

ಆರೆಸ್ಸೆಸ್ ಸೌಹಾರ್ದತೆ, ಭಾವೈಕ್ಯತೆಯ ದೊಡ್ಡ ಶತ್ರು  ಇದರ ವಿರುದ್ಧ ಎಲ್ಲರೂ ಒಂದಾಗಿ ಭಾರತ ದೇಶವನ್ನು ಉಳಿಸಬೇಕಾಗಿದೆ : ಬಿ.ಕೆ. ಹರಿಪ್ರಸಾದ್ -Vishwanews24

ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ “ಸಂಚುಗಾರ ಸಂಘ ಪರಿವಾರ” ಪುಸ್ತಕದ ವಿಮರ್ಶೆ ಮತ್ತು ಸಂವಾದ ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮಾತನಾಡಿ, ‘ಆರ್ ಎಸ್ ಎಸ್ ಹಾಗೂ ಸಂಘ ಪರಿವಾರ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಯ ದೊಡ್ಡ ಶತ್ರು. ಇದರ ವಿರುದ್ಧ ಎಲ್ಲರೂ ಒಂದಾಗಿ ಭಾರತ ದೇಶವನ್ನು ಉಳಿಸಬೇಕಾಗಿದೆ ಎಂದರು’.

ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ ಮಾತನಾಡಿ, ‘ಸಂಘ ಪರಿವಾರವನ್ನು ವಿರೋಧಿಸುವ ಧ್ವನಿಗಳು ಒಂದಾಗಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ‌. ನಮ್ಮ ದೇಶ ಭಾರತವನ್ನು ಉಳಿಸಬೇಕೆಂಬ ಉದ್ದೇಶವಿರುವವರು ಫ್ಯಾಸಿಸಂ ವಿರುದ್ಧದ ತಂತ್ರಗಾರಿಕೆ ಮಾಡಬೇಕಾಗಿದೆ. ಪ್ರಸ್ತುತ ಈ ದೇಶವನ್ನು ಸರಿಯಾಗಿ ತಿಳಿದುಕೊಂಡಂತಹ, ಧೈರ್ಯವಂತ ಮತ್ತು ನೈತಿಕತೆ ಇರುವ ನಾಯಕತ್ವದ ಅಗತ್ಯತೆಯಿದೆ. ಆ ನಾಯಕತ್ವದ ಮೂಲಕ ಹೊಸ ಬದಲಾವಣೆಯನ್ನು ನಾವು ಕಾಣಬೇಕಿದೆ ಎಂದರು.

ಮಂಗಳೂರು ವಿವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಪಟ್ಟಾಭಿರಾಮ ಸೋಮಯಾಜಿ ಹಾಗೂ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಇರ್ಷಾದ್ ಕಾವು ಮಾತನಾಡಿದರು. ವಿಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್, ಸಿಎಫ್ ಐ ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ಉಪಸ್ಥಿತರಿದ್ದರು.
ರಾಜ್ಯ ಸಮಿತಿ ಸದಸ್ಯ ಇಮ್ರಾನ್ ಪಿ.ಜೆ. ಸ್ವಾಗತಿಸಿದರು. ಸಮಿತಿ ಸದಸ್ಯ ರಿಯಾಝ್ ಕಡಂಬು ನಿರೂಪಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago