Featured

ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ ಇದೆ : ಪ್ರಿಯಾಂಕ್ ಖರ್ಗೆ – vishwanews24

ಆರೆಸ್ಸೆಸ್ ಸಂಘಟನೆ ಸಂವಿಧಾನ, ಕಾನೂನು ಅಡಿಯಲ್ಲಿ ನೋಂದಣಿ ಆಗುವರೆಗೂ ಬಿಡುವ ಮಾತೇ ಇಲ್ಲ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ(ಮನಿ ಲಾಂಡರಿಂಗ್) ಇದೆ. ಹೀಗಾಗಿ, ಕಾನೂನು, ಸಂವಿಧಾನದಡಿ ಈ ಸಂಘಟನೆ ನೋಂದಣಿ ಆಗುವವರೆಗೂ ನಾನು ಈ ವಿಚಾರ ಕೈಬಿಡುವ ಪುಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರವಿವಾರ ನಗರದ ಗಾಂಧಿ ಭವನ ಸಭಾಂಗಣದಲ್ಲಿ ಅಹರ್ನಿಶಿ ಪ್ರಕಾಶನ ಸಹಯೋಗದೊಂದಿಗೆ ಏರ್ಪಡಿಸಿದ್ದ ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ಬರೆದಿರುವ ‘ಕರಾವಳಿಯ ರಕ್ತ-ಕಣ್ಣೀರು’ (ಮತೀಯ ದ್ವೇಷದ ಬೆಂಕಿಯಲ್ಲಿ ನಲುಗಿದ ಬದುಕುಗಳು) ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಆರೆಸ್ಸೆಸ್ ಸಂಘಟನೆಯೊಂದಿಗೆ ಸರಿ ಸುಮಾರು 2500 ಸಹ ಸಂಘಟನೆಗಳು ಜತೆಯಾಗಿವೆ. ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ಅನೇಕ ರಾಷ್ಟ್ರಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ. ಇದನ್ನು ಗಮನಿಸಿದರೆ, ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ(ಮನಿ ಲಾಂಡರಿಂಗ್) ಇದೆ ಎಂದು ಹೇಳಬಹುದು ಎಂದರು.

ಇದನ್ನೂ ಓದಿ:

ಆರೆಸ್ಸೆಸ್‌ನ ಹಣದ ಮೂಲ ಪ್ರಶ್ನೆ ಮಾಡಿದರೆ ನಮಗೆ ಗುರು ದಕ್ಷಣೆ ಬರುತ್ತದೆ ಎಂದು ತಿಳಿಸುತ್ತಾರೆ. ಆದರೆ, ನಾನು ಅಧ್ಯಯನ ನಡೆಸಿದಾಗ ಇವರ ಪ್ರಕಾರ ಗುರು ದಕ್ಷಣೆ ಎಂದರೆ ‘ಧ್ವಜ’ ಎಂದರ್ಥ. ಹಾಗಾದರೆ, ನಾಳೆ ಬೆಳಗ್ಗೆ ನಾನು ಸಹ ನೀಲಿ ಧ್ವಜ ಹಾರಿಸಿ ಹಣ ವಸೂಲಿ ಮಾಡಿದರೆ, ಸರಕಾರ, ಇವರು(ಆರೆಸ್ಸೆಸ್) ಒಪ್ಪುತ್ತಾರೆಯೇ ಎಂದು ಕೇಳುತ್ತೇನೆ. ಹೀಗೆ, ಆಧಾರ ರಹಿತ ಮಾತುಗಳಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದೆ ಈ ಆರೆಸ್ಸೆಸ್ ಸಂಘಟನೆ ಸಂವಿಧಾನ, ಕಾನೂನು ಅಡಿಯಲ್ಲಿ ನೋಂದಣಿ ಆಗುವರೆಗೂ ನಾನು ಬಿಡುವ ಮಾತೇ ಇಲ್ಲ ಎಂದು ಅವರು ಹೇಳಿದರು. ವಾಲ್ಮೀಕಿ ಬರೆದ ರಾಮಾಯಣವೇ ಬೇರೆ, ಈಗ ನಡೆಯುತ್ತಿರುವುದೇ ಬೇರೆ. ರಾಜಕಾರಣಿಗಳು, ಧಾರ್ಮಿಕ ಗುರುಗಳು ತಮಗೆ ಬೇಕಾದಂತೆ ಧರ್ಮದ ಕುರಿತು ಮಾತನಾಡುತ್ತಿದ್ದಾರೆ. ಯಾವ ಧರ್ಮವೂ ಹಿಂಸೆ ಪುಚೋದಿಸಲ್ಲ. ಮೂರು-ಮೂರು ಮಕ್ಕಳನ್ನು ಹೆರಬೇಕು ಎನ್ನುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮದುವೆ ಆಗಲ್ಲ. ಆದರೂ, ಬೇರೆಯವರ ಮಕ್ಕಳನ್ನು ಎತ್ತಿಕಟ್ಟುವ ಮಾತು ಹೇಳುತ್ತಾರೆ. ಹೀಗೆ, ಬಿಜೆಪಿಯವರು ಹೊರಗೊಂದು, ಒಳಗೊಂದು ಮಾತುಗಳನ್ನು ನಿತ್ಯ ಹೇಳಿ ಬಡವರ ಮಕ್ಕಳನ್ನು ಬೀದಿಪಾಲು ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:

 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago