Featured

ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ ಇದೆ : ಪ್ರಿಯಾಂಕ್ ಖರ್ಗೆ – vishwanews24

ಆರೆಸ್ಸೆಸ್ ಸಂಘಟನೆ ಸಂವಿಧಾನ, ಕಾನೂನು ಅಡಿಯಲ್ಲಿ ನೋಂದಣಿ ಆಗುವರೆಗೂ ಬಿಡುವ ಮಾತೇ ಇಲ್ಲ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ(ಮನಿ ಲಾಂಡರಿಂಗ್) ಇದೆ. ಹೀಗಾಗಿ, ಕಾನೂನು, ಸಂವಿಧಾನದಡಿ ಈ ಸಂಘಟನೆ ನೋಂದಣಿ ಆಗುವವರೆಗೂ ನಾನು ಈ ವಿಚಾರ ಕೈಬಿಡುವ ಪುಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರವಿವಾರ ನಗರದ ಗಾಂಧಿ ಭವನ ಸಭಾಂಗಣದಲ್ಲಿ ಅಹರ್ನಿಶಿ ಪ್ರಕಾಶನ ಸಹಯೋಗದೊಂದಿಗೆ ಏರ್ಪಡಿಸಿದ್ದ ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ಬರೆದಿರುವ ‘ಕರಾವಳಿಯ ರಕ್ತ-ಕಣ್ಣೀರು’ (ಮತೀಯ ದ್ವೇಷದ ಬೆಂಕಿಯಲ್ಲಿ ನಲುಗಿದ ಬದುಕುಗಳು) ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಆರೆಸ್ಸೆಸ್ ಸಂಘಟನೆಯೊಂದಿಗೆ ಸರಿ ಸುಮಾರು 2500 ಸಹ ಸಂಘಟನೆಗಳು ಜತೆಯಾಗಿವೆ. ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ಅನೇಕ ರಾಷ್ಟ್ರಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ. ಇದನ್ನು ಗಮನಿಸಿದರೆ, ಆರೆಸ್ಸೆಸ್ ಹಿಂದೆ ಬಹುದೊಡ್ಡ ಹಣ ಅಕ್ರಮ ವರ್ಗಾವಣೆ ದಂಧೆ(ಮನಿ ಲಾಂಡರಿಂಗ್) ಇದೆ ಎಂದು ಹೇಳಬಹುದು ಎಂದರು.

ಇದನ್ನೂ ಓದಿ:

ಆರೆಸ್ಸೆಸ್‌ನ ಹಣದ ಮೂಲ ಪ್ರಶ್ನೆ ಮಾಡಿದರೆ ನಮಗೆ ಗುರು ದಕ್ಷಣೆ ಬರುತ್ತದೆ ಎಂದು ತಿಳಿಸುತ್ತಾರೆ. ಆದರೆ, ನಾನು ಅಧ್ಯಯನ ನಡೆಸಿದಾಗ ಇವರ ಪ್ರಕಾರ ಗುರು ದಕ್ಷಣೆ ಎಂದರೆ ‘ಧ್ವಜ’ ಎಂದರ್ಥ. ಹಾಗಾದರೆ, ನಾಳೆ ಬೆಳಗ್ಗೆ ನಾನು ಸಹ ನೀಲಿ ಧ್ವಜ ಹಾರಿಸಿ ಹಣ ವಸೂಲಿ ಮಾಡಿದರೆ, ಸರಕಾರ, ಇವರು(ಆರೆಸ್ಸೆಸ್) ಒಪ್ಪುತ್ತಾರೆಯೇ ಎಂದು ಕೇಳುತ್ತೇನೆ. ಹೀಗೆ, ಆಧಾರ ರಹಿತ ಮಾತುಗಳಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದೆ ಈ ಆರೆಸ್ಸೆಸ್ ಸಂಘಟನೆ ಸಂವಿಧಾನ, ಕಾನೂನು ಅಡಿಯಲ್ಲಿ ನೋಂದಣಿ ಆಗುವರೆಗೂ ನಾನು ಬಿಡುವ ಮಾತೇ ಇಲ್ಲ ಎಂದು ಅವರು ಹೇಳಿದರು. ವಾಲ್ಮೀಕಿ ಬರೆದ ರಾಮಾಯಣವೇ ಬೇರೆ, ಈಗ ನಡೆಯುತ್ತಿರುವುದೇ ಬೇರೆ. ರಾಜಕಾರಣಿಗಳು, ಧಾರ್ಮಿಕ ಗುರುಗಳು ತಮಗೆ ಬೇಕಾದಂತೆ ಧರ್ಮದ ಕುರಿತು ಮಾತನಾಡುತ್ತಿದ್ದಾರೆ. ಯಾವ ಧರ್ಮವೂ ಹಿಂಸೆ ಪುಚೋದಿಸಲ್ಲ. ಮೂರು-ಮೂರು ಮಕ್ಕಳನ್ನು ಹೆರಬೇಕು ಎನ್ನುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮದುವೆ ಆಗಲ್ಲ. ಆದರೂ, ಬೇರೆಯವರ ಮಕ್ಕಳನ್ನು ಎತ್ತಿಕಟ್ಟುವ ಮಾತು ಹೇಳುತ್ತಾರೆ. ಹೀಗೆ, ಬಿಜೆಪಿಯವರು ಹೊರಗೊಂದು, ಒಳಗೊಂದು ಮಾತುಗಳನ್ನು ನಿತ್ಯ ಹೇಳಿ ಬಡವರ ಮಕ್ಕಳನ್ನು ಬೀದಿಪಾಲು ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

21 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago