ಆರೋಗ್ಯದ ದೃಷ್ಟಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಕ್ಯಾನ್ಸಲ್ ಮಾಡಿ : ವಾಟಾಳ್ ನಾಗರಾಜ್ -Vishwanews24
ಆರೋಗ್ಯದ ದೃಷ್ಟಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಕ್ಯಾನ್ಸಲ್ ಮಾಡಿ : ವಾಟಾಳ್ ನಾಗರಾಜ್ -Vishwanews24
ಬೆಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಸರ್ಕಾರ ಅಂತಿಮ ನಿರ್ಧಾರ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿನ ಪ್ರಮಾಣ ಇನ್ನೂ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಈ ವೇಳೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸೋದು ಸರಿಯಲ್ಲ, ಮಕ್ಕಳ ಆರೋಗ್ಯ ಮುಖ್ಯ ಎಂಬ ಕಾರಣಕ್ಕಾಗಿಯೇ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದಲ್ಲವೇ? ಅದೇ ರೀತಿ ಎಸ್.ಎಸ್.ಎಲ್.ಸಿ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ಕ್ಯಾನ್ಸಲ್ ಮಾಡಿ ಎಂದು ಒತ್ತಾಯಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯದಿದ್ರೆ ಏನು ಆಗೋದಿಲ್ಲ. ಮಕ್ಕಳ ಪ್ರಾಣದ ಜೊತೆ ಆಟ ಆಡಬೇಡಿ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಟಮಾರಿತನ ಬಿಡಬೇಕು. ಇದು ಅತ್ಯಂತ ಗಂಭೀರ ಪರಿಸ್ಥಿತಿ. ಪರೀಕ್ಷೆ ರದ್ದು ಮಾಡಿ ಎಂದು ಸರ್ಕಾರಕ್ಕೆ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
