ಆರೋಗ್ಯದ ಸಮಸ್ಯೆ ಇದ್ದರೂ ಜನರ ಸೇವೆ ಮಾಡುತ್ತಿದ್ದೇನೆ ; ರೈತರಿಗೆ ಕೊಟ್ಟಂತಹ ಮಾತನ್ನು ಪ್ರಾಮಾಣಿಕವಾಗಿ ಈಡೇರಿಸಲು ಸ್ಪಂದಿಸಿದ್ದೇವೆ : ಸಿಎಂ. ಕುಮಾರಸ್ವಾಮಿ -Vishwanews24
ಬೆಂಗಳೂರು :ರೈತರ ಸಾಲಮನ್ನಾ ಬಗ್ಗೆ ಘೋಷಣೆ ಮಾಡಿದ್ದೇನೆ. ರಾಷ್ಟ್ರೀಕೃತ ಬ್ಯಾಂಕ್ ಗಳು 34೦೦೦ ಕೋಟಿ ರೂ. ಸಾಲದ ಮಾಹಿತಿ ನೀಡಿದ್ದರು. ನಾಲ್ಕು ಹಂತಗಳಲ್ಲಿ ನಾಲ್ಕು ವರ್ಷದಲ್ಲಿ ಹಣದ ಹಂಚಿಕೆ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ಸಿಎಂ ಹೇಳಿದರು.
ರೈತರಿಂದ ಮಾಹಿತಿ ಪಡೆದು ದಾಖಲೆ ಪಡೆದು ಮನ್ನಾ ಸೌಲಭ್ಯ ಪಡೆಯಲಾಗಿದೆ. 2018-19 ರಲ್ಲಿ 12೦೦೦ ಕೋಟಿ ರೂ, 2019-20 ರಲ್ಲಿ 13೦೦೦ ಕೋಟಿ ರೂ. ಸೇರಿ ಒಟ್ಟು 25೦೦೦ ಕೋಟಿ ರೂ. ಅನುದಾನ ನೀಡಿದ್ದೇವೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು..
ಬ್ಯಾಂಕ್ ಅಧಿಕಾರಿಗಳು ಹಿಂದೆದೂ ಇಷ್ಟು ವೈಜ್ಞಾನಿಕವಾಗಿ ಸಾಲಮನ್ನಾ ಮಾಡಲಾಗಿದೆ. ರೈತರ ಬೇರೆ ಬೇರೆ ಹೆಸರಿನಲ್ಲಿ ಸಾಲ ಪಡೆಯಲಾಗಿದೆ. ಅದರ ಹಿನ್ನಲೆಯಲ್ಲಿ ಹೊರೆ ಕಡಿಮೆಯಾಗಿದೆ ಎಂದರು.
ರೈತರಿಗೆ ಕೊಟ್ಟಂತಹ ಮಾತನ್ನು ಪ್ರಾಮಾಣಿಕವಾಗಿ ಈಡೇರಿಸಲು ಸ್ಪಂದಿಸಿದ್ದೇವೆ.
ಗ್ರಾಮ ವಾಸ್ತವ್ಯದಿಂದಾಗಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಸ್ಥಳದಲ್ಲಿಯೇ ಉಳಿದ ಸಮಸ್ಯೆ ಬಗೆಹರಿಸಲು ಸಹಕಾರವಾಗಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾಡಿನ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ತಿರಸ್ಕರಿಸಿದ್ದಾರೆ. ಜನರು ಬಿಜೆಪಿಗೆ ಮತನೀಡಿ ಮೋಸ ಹೋದೆವು ಎಂದು ಬೇಸರಗೊಳ್ಳುವಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಮ್ಮ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂಬ ವಿಶ್ವಾಸ ನನಗಿದೆ. ಮೈತ್ರಿ ಸರ್ಕಾರ ಜನರ ಎಲ್ಲ ನಿರೀಕ್ಷೆಗಳನ್ನು ಪೂರ್ಣಗೊಳಿಸಿಯೇ ತೀರುತ್ತದೆ. 12 ವರ್ಷದ ಹಿಂದೆ ಪರಿಸ್ಥಿತಿ ಬೇರೆ ಇತ್ತು 12 ವರ್ಷದ ಹಿಂದೆ ಸಿಎಂ ಆಗಿದ್ದಾಗ ಇದ್ದಂತಹಾ ಪರಿಸ್ಥಿತಿಗೂ ಇಂದಿನ ಪರಿಸ್ಥಿತಿಗೂ ವ್ಯತ್ಯಾಸ ಇದೆ. 12 ವರ್ಷದ ಹಿಂದೆ ಇದ್ದಂತಹಾ ಶಕ್ತಿ ಈಗ ಇಲ್ಲ. ಆದರೆ ಉತ್ಸಾಹ ಇದೆ. ಆರೋಗ್ಯದ ಸಮಸ್ಯೆ ಇದ್ದರೂ ಬದಿಗೊತ್ತಿ ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
