ಬೆಂಗಳೂರು :ರೈತರ ಸಾಲಮನ್ನಾ ಬಗ್ಗೆ ಘೋಷಣೆ ಮಾಡಿದ್ದೇನೆ. ರಾಷ್ಟ್ರೀಕೃತ ಬ್ಯಾಂಕ್ ಗಳು 34೦೦೦ ಕೋಟಿ ರೂ. ಸಾಲದ ಮಾಹಿತಿ ನೀಡಿದ್ದರು. ನಾಲ್ಕು ಹಂತಗಳಲ್ಲಿ ನಾಲ್ಕು ವರ್ಷದಲ್ಲಿ ಹಣದ ಹಂಚಿಕೆ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ಸಿಎಂ ಹೇಳಿದರು.
ರೈತರಿಂದ ಮಾಹಿತಿ ಪಡೆದು ದಾಖಲೆ ಪಡೆದು ಮನ್ನಾ ಸೌಲಭ್ಯ ಪಡೆಯಲಾಗಿದೆ. 2018-19 ರಲ್ಲಿ 12೦೦೦ ಕೋಟಿ ರೂ, 2019-20 ರಲ್ಲಿ 13೦೦೦ ಕೋಟಿ ರೂ. ಸೇರಿ ಒಟ್ಟು 25೦೦೦ ಕೋಟಿ ರೂ. ಅನುದಾನ ನೀಡಿದ್ದೇವೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು..
ಬ್ಯಾಂಕ್ ಅಧಿಕಾರಿಗಳು ಹಿಂದೆದೂ ಇಷ್ಟು ವೈಜ್ಞಾನಿಕವಾಗಿ ಸಾಲಮನ್ನಾ ಮಾಡಲಾಗಿದೆ. ರೈತರ ಬೇರೆ ಬೇರೆ ಹೆಸರಿನಲ್ಲಿ ಸಾಲ ಪಡೆಯಲಾಗಿದೆ. ಅದರ ಹಿನ್ನಲೆಯಲ್ಲಿ ಹೊರೆ ಕಡಿಮೆಯಾಗಿದೆ ಎಂದರು.
ರೈತರಿಗೆ ಕೊಟ್ಟಂತಹ ಮಾತನ್ನು ಪ್ರಾಮಾಣಿಕವಾಗಿ ಈಡೇರಿಸಲು ಸ್ಪಂದಿಸಿದ್ದೇವೆ.
ಗ್ರಾಮ ವಾಸ್ತವ್ಯದಿಂದಾಗಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಸ್ಥಳದಲ್ಲಿಯೇ ಉಳಿದ ಸಮಸ್ಯೆ ಬಗೆಹರಿಸಲು ಸಹಕಾರವಾಗಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾಡಿನ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ತಿರಸ್ಕರಿಸಿದ್ದಾರೆ. ಜನರು ಬಿಜೆಪಿಗೆ ಮತನೀಡಿ ಮೋಸ ಹೋದೆವು ಎಂದು ಬೇಸರಗೊಳ್ಳುವಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಮ್ಮ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂಬ ವಿಶ್ವಾಸ ನನಗಿದೆ. ಮೈತ್ರಿ ಸರ್ಕಾರ ಜನರ ಎಲ್ಲ ನಿರೀಕ್ಷೆಗಳನ್ನು ಪೂರ್ಣಗೊಳಿಸಿಯೇ ತೀರುತ್ತದೆ. 12 ವರ್ಷದ ಹಿಂದೆ ಪರಿಸ್ಥಿತಿ ಬೇರೆ ಇತ್ತು 12 ವರ್ಷದ ಹಿಂದೆ ಸಿಎಂ ಆಗಿದ್ದಾಗ ಇದ್ದಂತಹಾ ಪರಿಸ್ಥಿತಿಗೂ ಇಂದಿನ ಪರಿಸ್ಥಿತಿಗೂ ವ್ಯತ್ಯಾಸ ಇದೆ. 12 ವರ್ಷದ ಹಿಂದೆ ಇದ್ದಂತಹಾ ಶಕ್ತಿ ಈಗ ಇಲ್ಲ. ಆದರೆ ಉತ್ಸಾಹ ಇದೆ. ಆರೋಗ್ಯದ ಸಮಸ್ಯೆ ಇದ್ದರೂ ಬದಿಗೊತ್ತಿ ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…