Featured

ಆರೋಗ್ಯದ ಸಮಸ್ಯೆ ಇದ್ದರೂ ಜನರ ಸೇವೆ ಮಾಡುತ್ತಿದ್ದೇನೆ ; ರೈತರಿಗೆ ಕೊಟ್ಟಂತಹ ಮಾತನ್ನು ಪ್ರಾಮಾಣಿಕವಾಗಿ ಈಡೇರಿಸಲು ಸ್ಪಂದಿಸಿದ್ದೇವೆ : ಸಿಎಂ. ಕುಮಾರಸ್ವಾಮಿ -Vishwanews24

ಬೆಂಗಳೂರು :ರೈತರ ಸಾಲಮನ್ನಾ ಬಗ್ಗೆ ಘೋಷಣೆ ಮಾಡಿದ್ದೇನೆ. ರಾಷ್ಟ್ರೀಕೃತ ಬ್ಯಾಂಕ್ ಗಳು 34೦೦೦ ಕೋಟಿ ರೂ. ಸಾಲದ ಮಾಹಿತಿ ನೀಡಿದ್ದರು. ನಾಲ್ಕು ಹಂತಗಳಲ್ಲಿ ನಾಲ್ಕು ವರ್ಷದಲ್ಲಿ ಹಣದ ಹಂಚಿಕೆ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ಸಿಎಂ ಹೇಳಿದರು.

ರೈತರಿಂದ ಮಾಹಿತಿ ಪಡೆದು ದಾಖಲೆ‌ ಪಡೆದು ಮನ್ನಾ ಸೌಲಭ್ಯ ಪಡೆಯಲಾಗಿದೆ. 2018-19 ರಲ್ಲಿ 12೦೦೦ ಕೋಟಿ ರೂ, 2019-20 ರಲ್ಲಿ 13೦೦೦ ಕೋಟಿ ರೂ. ಸೇರಿ ಒಟ್ಟು 25೦೦೦ ಕೋಟಿ ರೂ. ಅನುದಾನ ನೀಡಿದ್ದೇವೆ  ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು..

ಬ್ಯಾಂಕ್ ಅಧಿಕಾರಿಗಳು ಹಿಂದೆದೂ ಇಷ್ಟು ವೈಜ್ಞಾನಿಕವಾಗಿ ಸಾಲಮನ್ನಾ ಮಾಡಲಾಗಿದೆ. ರೈತರ ಬೇರೆ ಬೇರೆ ಹೆಸರಿನಲ್ಲಿ ಸಾಲ ಪಡೆಯಲಾಗಿದೆ. ಅದರ ಹಿನ್ನಲೆಯಲ್ಲಿ ಹೊರೆ ಕಡಿಮೆಯಾಗಿದೆ ಎಂದರು.

ರೈತರಿಗೆ ಕೊಟ್ಟಂತಹ ಮಾತನ್ನು ಪ್ರಾಮಾಣಿಕವಾಗಿ ಈಡೇರಿಸಲು ಸ್ಪಂದಿಸಿದ್ದೇವೆ.

ಗ್ರಾಮ ವಾಸ್ತವ್ಯದಿಂದಾಗಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಸ್ಥಳದಲ್ಲಿಯೇ ಉಳಿದ ಸಮಸ್ಯೆ ಬಗೆಹರಿಸಲು ಸಹಕಾರವಾಗಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾಡಿನ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ತಿರಸ್ಕರಿಸಿದ್ದಾರೆ.‌ ಜನರು ಬಿಜೆಪಿಗೆ ಮತನೀಡಿ ಮೋಸ ಹೋದೆವು ಎಂದು ಬೇಸರಗೊಳ್ಳುವಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ನಮ್ಮ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂಬ ವಿಶ್ವಾಸ ನನಗಿದೆ. ಮೈತ್ರಿ ಸರ್ಕಾರ ಜನರ ಎಲ್ಲ ನಿರೀಕ್ಷೆಗಳನ್ನು ಪೂರ್ಣಗೊಳಿಸಿಯೇ ತೀರುತ್ತದೆ. 12 ವರ್ಷದ ಹಿಂದೆ ಪರಿಸ್ಥಿತಿ ಬೇರೆ ಇತ್ತು 12 ವರ್ಷದ ಹಿಂದೆ ಸಿಎಂ ಆಗಿದ್ದಾಗ ಇದ್ದಂತಹಾ ಪರಿಸ್ಥಿತಿಗೂ ಇಂದಿನ ಪರಿಸ್ಥಿತಿಗೂ ವ್ಯತ್ಯಾಸ ಇದೆ. 12 ವರ್ಷದ ಹಿಂದೆ ಇದ್ದಂತಹಾ ಶಕ್ತಿ ಈಗ ಇಲ್ಲ. ಆದರೆ ಉತ್ಸಾಹ ಇದೆ. ಆರೋಗ್ಯದ ಸಮಸ್ಯೆ ಇದ್ದರೂ ಬದಿಗೊತ್ತಿ ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

16 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

16 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

16 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

17 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

17 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

18 hours ago