ಹಾವೇರಿ: ಇಂದಿನಿಂದ ದೇಶಾದ್ಯಂತ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಅಭಿಯಾನ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾವೇರಿ ಜಿಲ್ಲೆಯಲ್ಲಿ ಲಸಿಕೆಯನ್ನು ಪಡೆದರು.
ಹಾವೇರಿಯ ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಚಿವ ಬಿ.ಸಿ. ಪಾಟೀಲ್ 60 ವರ್ಷ ಮೇಲ್ಪಟ್ಟ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಬಿ.ಸಿ. ಪಾಟೀಲ್ ಅವರು, ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಜನರಿಗೆ ಕೊರೋನಾ ವೈರಸ್ ವಿರುದ್ಧ ಹೋರಾಡಲು ಬೂಸ್ಟರ್ ಡೋಸ್ನ್ನು ಇಂದಿನಿಂದ ನೀಡಲಾಗುತ್ತಿದೆ. ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ ಎಂದರು.
ಈ ಹಿಂದೆ ಮೊದಲ ಮತ್ತು ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಕೋವಿಶೀಲ್ಡ್, ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆದವರು, ಬೂಸ್ಟರ್ ಡೋಸ್ನ್ನೂ ಕೂಡ ಅವುಗಳನ್ನೇ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಸುವುದಿಲ್ಲ ಎಂದು ತಿಳಿಸಿದರು.
ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸೇವಕರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಮೂರನೇ ಡೋಸ್ ಲಸಿಕೆಯನ್ನು ಪಡೆಯುವುದರಿಂದ ಓಮಿಕ್ರಾನ್ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವ ವಿರುದ್ಧ ಶೇ. 88ರಷ್ಟು ರಕ್ಷಣೆ ನೀಡುತ್ತದೆ ಎಂದು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ಮಾಹಿತಿ ನೀಡಿದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…