ಹಾವೇರಿ: ಇಂದಿನಿಂದ ದೇಶಾದ್ಯಂತ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಅಭಿಯಾನ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾವೇರಿ ಜಿಲ್ಲೆಯಲ್ಲಿ ಲಸಿಕೆಯನ್ನು ಪಡೆದರು.
ಹಾವೇರಿಯ ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಚಿವ ಬಿ.ಸಿ. ಪಾಟೀಲ್ 60 ವರ್ಷ ಮೇಲ್ಪಟ್ಟ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಬಿ.ಸಿ. ಪಾಟೀಲ್ ಅವರು, ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಜನರಿಗೆ ಕೊರೋನಾ ವೈರಸ್ ವಿರುದ್ಧ ಹೋರಾಡಲು ಬೂಸ್ಟರ್ ಡೋಸ್ನ್ನು ಇಂದಿನಿಂದ ನೀಡಲಾಗುತ್ತಿದೆ. ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ ಎಂದರು.
ಈ ಹಿಂದೆ ಮೊದಲ ಮತ್ತು ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಕೋವಿಶೀಲ್ಡ್, ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆದವರು, ಬೂಸ್ಟರ್ ಡೋಸ್ನ್ನೂ ಕೂಡ ಅವುಗಳನ್ನೇ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಸುವುದಿಲ್ಲ ಎಂದು ತಿಳಿಸಿದರು.
ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸೇವಕರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಮೂರನೇ ಡೋಸ್ ಲಸಿಕೆಯನ್ನು ಪಡೆಯುವುದರಿಂದ ಓಮಿಕ್ರಾನ್ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವ ವಿರುದ್ಧ ಶೇ. 88ರಷ್ಟು ರಕ್ಷಣೆ ನೀಡುತ್ತದೆ ಎಂದು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ಮಾಹಿತಿ ನೀಡಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…