ಬೆಳಗಾವಿ :ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ ಸೌಧದ ಭವ್ಯ ಮೆಟ್ಟಟಿಲುಗಳ ಮೇಲೆ ಆಯೋಜಿಸಲಾಗಿದ್ದ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ಗಳಿಗೆ ಚಾಲನೆ ನೀಡಿ ಮಾತನಾಡಿದರು.
ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಿಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು.
ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರ್ಕಾರದ ಗುರಿ
ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…