ಹಿತ್ತಲ ಗಿಡ ಮದ್ದಲ್ಲ ಎಂಬಂತೆ ಜನರು ಜೀವನ ಸಾಗಿಸಲು ಆರಂಭಿಸಿದ್ದಾರೆ. ಪ್ರತೀ ಕಾಯಿಲೆ, ಸಮಸ್ಯೆಗಳಿಗೂ ವೈದ್ಯರ ಮೊರೆ ಹೋಗುವುದು ಸಾಮಾನ್ಯವಾಗಿ ಹೋಗಿದೆ. ದೇಹದ ಆರೋಗ್ಯ ಕಾಪಾಡಿಕೊಳ್ಳಲು ಹಣ್ಣು, ತರಕಾರಿಗಳು ಹಾಗೂ ಸೊಪ್ಪುಗಳ ಸೇವನೆ ಬಹು ಮುಖ್ಯವಾಗಿದ್ದು, ಇವುಗಳ ಪ್ರಾಮುಖ್ಯತೆಗಳನ್ನು ಪೋಷಕರು ತಿಳಿದುಕೊಂಡು, ಅದನ್ನು ಮಕ್ಕಳಿಗೂ ಹೇಳಿಕೊಡುವ ಮನೋಭಾನೆಯನ್ನು ಬೆಳೆಸಿಕೊಳ್ಳಬೇಕು.
ಪ್ರತೀನಿತ್ಯ ಅಡುಗೆ ಮನೆಯಲ್ಲಿ ಬಳಸಲಾಗುವ ಪಾಲಾಕ್ ಸೊಪ್ಪು ಅನೇಕ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಸಬಲ್ಲ ಗುಣಗಳನ್ನು ಹೊಂದಿದೆ. ಇದರ ಬಗ್ಗೆ ಬಹುತೇಕ ಮಂದಿಗೆ ಮಾಹಿತಿಯೇ ತಿಳಿದಿರುವುದಿಲ್ಲ. ಪಾಲಾಕ್ ಸೊಪ್ಪಿನ ಮಹತ್ವದ ಕುರಿತು ಹಾಗೂ ಅದರಲ್ಲಿರುವ ಔಷಧೀಯ ಗುಣಗಳನ್ನು ಇಲ್ಲಿ ವಿವರಿಸಲಾಗಿದೆ…
ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯವರ್ಧಕ ಗುಣಗಳು
* ಕೂದಲಿನ ಬೆಳವಣಿಗೆಗೆ ಪಾಲಾಕ್ ಸೊಪ್ಪು ಬಹಳ ಸಹಕಾರಿ. ಕಬ್ಬಿಣ, ವಿಟಮಿನ್ ಎ ಮತ್ತು ಸಿ ಹಾಗೂ ಪ್ರೊಟೀನ್ ಅಂಶಗಳು ಈ ಪಾಲಾಕ್ ಸೊಪ್ಪಿನಲ್ಲಿ ಹೇರಳವಾಗಿರುವುದರಿಂದ ಕೂದಲು ಉದುರುವುದನ್ನು ತಡೆದು, ನೈಸರ್ಗಿಕ ಕಾಂತಿ ನೀಡುತ್ತದೆ.
* ಪಾಲಕ್ ಸೊಪ್ಪನ್ನು ನಿಯಮಿತವಾಗಿ ತಿನ್ನುವುದರಿಂದ ಮುಖದ ಮೇಲೆ ಮೊಡವೆಗಳು ಮಾಯವಾಗಿ, ಮುಖದಲ್ಲಿ ನೆರಿಗೆ ಕಡಿಮೆಯಾಗುತ್ತದೆ.
* ನರ ದೌರ್ಬಲ್ಯವಿದ್ದವರು ಪಾಲಕ್ ಸೊಪ್ಪನ್ನು ತಿನ್ನುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ.
* ಪಾಲಾಕ್ ಸೊಪ್ಪು ಕ್ಯಾನ್ಸರ್ ರೋಗಿಗಳಿಗೆ ದಿವ್ಯೌಷಧ. ಏಕೆಂದರೆ ಕ್ಯಾನ್ಸರ್ ಕಣಗಳನ್ನು ಕೊಲ್ಲಬಲ್ಲ ಶಕ್ತಿ ಪಾಲಾಕ್ ಸೊಪ್ಪಿನಲ್ಲಿದೆ.
* ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರು ಪಾಲಾಕ್ ಸೊಪ್ಪನ್ನು ಹೆಚ್ಚು ಸೇವಿಸಿ. ಇದರಲ್ಲಿರುವ “ಕ್ಯಾರೋಟಿನೈಡ್” ಅಂಶ ದೇಹದಲ್ಲಿರುವ ಕೊಲೆಸ್ಟ್ರಾಲನ್ನ ಕರಗಿಸಿ, ದೇಹದ ತೂಕವನ್ನು ಸಮತೋಲನದಲ್ಲಿಡುತ್ತದೆ.
* ದಿನನಿತ್ಯ ಪಾಲಾಕ್ ಸೊಪ್ಪಿನ ರಸ ಸೇವಿಸುವುದರಿಂದ ರಕ್ತಹಿನತೆಯ ಸಮಸ್ಯೆ ನಿವಾರಣೆಯಾಗುತ್ತದೆ.
* ಮಕ್ಕಳಲ್ಲಿ ಅಥವಾ ವೃದ್ಧರಲ್ಲಿ ನೆನಪಿನ ಶಕ್ತಿ ಸಮಸ್ಯೆಯಿದ್ದರೆ ಪಾಲಾಕ್ ಸೊಪ್ಪು ಸೇವಿಸುವುದರಿಂದ ಮೆದುಳಿನ ನರಕೋಶಗಳ ವೃದ್ಧಿಯಾಗಿ ನೆನಪಿನ ಶಕ್ತಿ ಹೆಚ್ಚಿಸುತ್ತದೆ.
* ಸಂಧಿವಾತದ ಸಂಸ್ಯೆಯಿದ್ದವರೂ ಕೂಡ ಪಾಲಾಕ್ ಸೊಪ್ಪು ಸೇವಿಸಬಹುದು.
* ಪಾಲಾಕ್ ಸೊಪ್ಪಿನಲ್ಲಿ ಹೆಚ್ಚು ನಾರಿನಂಶ ಹಾಗೂ ನೀರಿನಂಶ ಇರುವುದರಿಂದ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವುದಲ್ಲದೆ, ಜೀರ್ಣಶಕ್ತಿಗೆ ಸಹಕರಿಸುತ್ತದೆ.
ಹಾಗಿದ್ದರೆ ಇನ್ನೇಕೆ ತಡ. ಇಂದಿನಿಂದಲೇ ನಿಮ್ಮ ಆಹಾರ ಪದ್ಧತಿಯಲ್ಲಿ ಪಾಲಾಕ್ ಸೊಪ್ಪನ್ನು ಅಳವಡಿಸಿಕೊಂಡು ಆರೋಗ್ಯ ವೃದ್ಧಿಸಿಕೊಳ್ಳಿ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…