Featured

ಆರೋಗ್ಯ, ಸೌಂದರ್ಯ ವೃದ್ಧಿಸಬಲ್ಲ ಹಸಿರು ಸೊಪ್ಪುಗಳ ರಾಜ ಪಾಲಾಕ್ ಸೊಪ್ಪಿನ ಬಗ್ಗೆ ನಿಮಗೆಷ್ಟು ಗೊತ್ತು ? ಇಲ್ಲಿದೆ ಮಾಹಿತಿ -Vishwanews24

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಆಹಾರಗಳಿಂದ ಮಕ್ಕಳು ದೂರವಿರುವುದು ಸಾಮಾನ್ಯವಾಗಿ ಹೋಗಿದೆ. ನಗರದ ಬಿಝಿ ಲೈಫ್ ನಲ್ಲಿ ತೊಡಗಿಕೊಳ್ಳುತ್ತಿರುವ ಪೋಷಕರು ಮಕ್ಕಳಿಗೆ ಆರೋಗ್ಯಕರ ಹಾಗೂ ಪೌಷ್ಟಿಕ ಆಹಾರ ಕೊಡುತ್ತಿರುವುದೇ ವಿರಳವಾಗಿ ಹೋಗಿದೆ. ಆರೋಗ್ಯದ ಕಡೆ ಗಮನ ಕೊಡುವ ಜನರ ಸಂಖ್ಯೆಯಂತೂ ವಿರಳವಾಗಿ ಹೋಗುತ್ತಿದೆ. ತರಕಾರಿ, ಹಸಿರುವ ಸೊಪ್ಪುಗಳ ಮಹತ್ವವನ್ನೇ ಜನರು ಮರೆತು ಹೋಗುತ್ತಿದ್ದಾರೆ.

ಹಿತ್ತಲ ಗಿಡ ಮದ್ದಲ್ಲ ಎಂಬಂತೆ ಜನರು ಜೀವನ ಸಾಗಿಸಲು ಆರಂಭಿಸಿದ್ದಾರೆ. ಪ್ರತೀ ಕಾಯಿಲೆ, ಸಮಸ್ಯೆಗಳಿಗೂ ವೈದ್ಯರ ಮೊರೆ ಹೋಗುವುದು ಸಾಮಾನ್ಯವಾಗಿ ಹೋಗಿದೆ. ದೇಹದ ಆರೋಗ್ಯ ಕಾಪಾಡಿಕೊಳ್ಳಲು ಹಣ್ಣು, ತರಕಾರಿಗಳು ಹಾಗೂ ಸೊಪ್ಪುಗಳ ಸೇವನೆ ಬಹು ಮುಖ್ಯವಾಗಿದ್ದು, ಇವುಗಳ ಪ್ರಾಮುಖ್ಯತೆಗಳನ್ನು ಪೋಷಕರು ತಿಳಿದುಕೊಂಡು, ಅದನ್ನು ಮಕ್ಕಳಿಗೂ ಹೇಳಿಕೊಡುವ ಮನೋಭಾನೆಯನ್ನು ಬೆಳೆಸಿಕೊಳ್ಳಬೇಕು.

ಪ್ರತೀನಿತ್ಯ ಅಡುಗೆ ಮನೆಯಲ್ಲಿ ಬಳಸಲಾಗುವ ಪಾಲಾಕ್ ಸೊಪ್ಪು ಅನೇಕ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಸಬಲ್ಲ ಗುಣಗಳನ್ನು ಹೊಂದಿದೆ. ಇದರ ಬಗ್ಗೆ ಬಹುತೇಕ ಮಂದಿಗೆ ಮಾಹಿತಿಯೇ ತಿಳಿದಿರುವುದಿಲ್ಲ. ಪಾಲಾಕ್ ಸೊಪ್ಪಿನ ಮಹತ್ವದ ಕುರಿತು ಹಾಗೂ ಅದರಲ್ಲಿರುವ ಔಷಧೀಯ ಗುಣಗಳನ್ನು ಇಲ್ಲಿ ವಿವರಿಸಲಾಗಿದೆ…

  • ಹಸಿರು ತರಕಾರಿ ಹಾಗೂ ಸೊಪ್ಪುಗಳ ಮಾರಾಟಕ್ಕೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಪ್ ಗಳಿದ್ದು, ಆ್ಯಪ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳುವ ಮೂಲಕ ಸೊಪ್ಪು ಹಾಗೂ ತರಕಾರಿಗಳನ್ನು ಆರ್ಡರ್ ಮಾಡಿ ಮನೆಗಳ ಬಾಗಿಲಿಗೆ ಬರುವಂತೆ ಮಾಡಿಕೊಳ್ಳಬಹುದು.ಕೀರೈಕಡೈ ಎಂಬ ಕೊಯಿಮತ್ತೂರು ಮೂಲದ ಆ್ಯಪ್ ಹಸಿರು ಸೊಪ್ಪುಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದೆ. ಕೇವಲ ಮಾರಾಟ ಮಾಡುವುದಷ್ಟೇ ಅಲ್ಲದೆ, ಅಡುಗೆ ಮಾಡುವ ಕ್ರಮಗಳ ಕುರಿತೂ ಆ್ಯಪ್ ನಲ್ಲಿ ಮಾಹಿತಿ ನೀಡುವ ಕೆಲಸ ಮಾಡಲಾಗುತ್ತಿದೆ.
  • ಕೀರೈಕಡೈ ಸ್ಥಾಪಕ ಶ್ರೀರಾಮ್ ಈ ಬಗ್ಗೆ ಮಾತನಾಡಿದ್ದು, ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯದತ್ತ ಹೆಚ್ಚು ಗಮನಕೊಡಲು ಆರಂಭಿಸಿದ್ದಾರೆ. ಪಾಲಾಕ್ ಸೊಪ್ಪಿನ ಮಹತ್ವ ಅರಿತುಕೊಂಡು ಪ್ರತೀನಿತ್ಯದ ತಮ್ಮ ಆಹಾರ ಕ್ರಮದಲ್ಲಿ ಪಾಲಾಕ್ ಸೊಪ್ಪನ್ನು ಸೇರ್ಪಡೆಗೊಳಿಸಿಕೊಳ್ಳುತ್ತಿದ್ದಾರೆಂದು ಹೇಳಿದ್ದಾರೆ.
  • ಕೊಯಿಮತ್ತೂರಿನಲ್ಲಿ ಒಟ್ಟು 35 ಕೃಷಿ ಭೂಮಿಯಿದ್ದು, ಅಲ್ಲಿ ಹಸಿರು ತರಕಾರಿಗಳನ್ನು ಬೆಳೆಯಲಾಗುತ್ತಿದೆ. ಪ್ರತೀನಿತ್ಯ 10,000 ಹೆಚ್ಚು ಸೊಪ್ಪು ಕಟ್ಟುಗಳನ್ನು ಮಾರಾಟ ಮಾಡಲಾಗುತ್ತಿದೆ. ಅಂಗಡಿ ಬೆಳಿಗ್ಗೆ 6.30ರಿಂದ 11ರವರೆಗೂ ಹಾಗೂ ಸಂಜೆ 4ರಿಂದ 9ರವರೆಗೂ ತೆರೆಯಲಾಗಿರುತ್ತೆದ. ತರಕಾರಿ ಹಾಗೂ ಸೊಪ್ಪಿನಿಂದ ತಯಾರಿಸಿದ ಕುರುಕಲು ತಿಂಡಿಗಳನ್ನೂ ಇಲ್ಲಿ ಮಾರಾಟ ಮಾಡಲಾಗುತ್ತದೆ. ಆ್ಯಪ್ ಮೂಲಕ ಬಂದ ಆರ್ಡರ್ ಗಳನ್ನು ಸ್ವೀಕರಿಸಿ, ಗ್ರಾಹಕರಿಗೆ ತರಕಾರಿ, ಸೊಪ್ಪು ತಲುಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯವರ್ಧಕ ಗುಣಗಳು

* ಕೂದಲಿನ ಬೆಳವಣಿಗೆಗೆ ಪಾಲಾಕ್ ಸೊಪ್ಪು ಬಹಳ ಸಹಕಾರಿ. ಕಬ್ಬಿಣ, ವಿಟಮಿನ್ ಎ ಮತ್ತು ಸಿ ಹಾಗೂ ಪ್ರೊಟೀನ್ ಅಂಶಗಳು ಈ ಪಾಲಾಕ್ ಸೊಪ್ಪಿನಲ್ಲಿ ಹೇರಳವಾಗಿರುವುದರಿಂದ ಕೂದಲು ಉದುರುವುದನ್ನು ತಡೆದು, ನೈಸರ್ಗಿಕ ಕಾಂತಿ ನೀಡುತ್ತದೆ.

* ಪಾಲಕ್ ಸೊಪ್ಪನ್ನು ನಿಯಮಿತವಾಗಿ ತಿನ್ನುವುದರಿಂದ ಮುಖದ ಮೇಲೆ ಮೊಡವೆಗಳು ಮಾಯವಾಗಿ, ಮುಖದಲ್ಲಿ ನೆರಿಗೆ ಕಡಿಮೆಯಾಗುತ್ತದೆ.

* ನರ ದೌರ್ಬಲ್ಯವಿದ್ದವರು ಪಾಲಕ್ ಸೊಪ್ಪನ್ನು ತಿನ್ನುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ.

* ಪಾಲಾಕ್ ಸೊಪ್ಪು ಕ್ಯಾನ್ಸರ್ ರೋಗಿಗಳಿಗೆ ದಿವ್ಯೌಷಧ. ಏಕೆಂದರೆ ಕ್ಯಾನ್ಸರ್ ಕಣಗಳನ್ನು ಕೊಲ್ಲಬಲ್ಲ ಶಕ್ತಿ ಪಾಲಾಕ್ ಸೊಪ್ಪಿನಲ್ಲಿದೆ.

* ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರು ಪಾಲಾಕ್ ಸೊಪ್ಪನ್ನು ಹೆಚ್ಚು ಸೇವಿಸಿ. ಇದರಲ್ಲಿರುವ “ಕ್ಯಾರೋಟಿನೈಡ್” ಅಂಶ ದೇಹದಲ್ಲಿರುವ ಕೊಲೆಸ್ಟ್ರಾಲನ್ನ ಕರಗಿಸಿ, ದೇಹದ ತೂಕವನ್ನು ಸಮತೋಲನದಲ್ಲಿಡುತ್ತದೆ.

* ದಿನನಿತ್ಯ ಪಾಲಾಕ್ ಸೊಪ್ಪಿನ ರಸ ಸೇವಿಸುವುದರಿಂದ ರಕ್ತಹಿನತೆಯ ಸಮಸ್ಯೆ ನಿವಾರಣೆಯಾಗುತ್ತದೆ.

* ಮಕ್ಕಳಲ್ಲಿ ಅಥವಾ ವೃದ್ಧರಲ್ಲಿ ನೆನಪಿನ ಶಕ್ತಿ ಸಮಸ್ಯೆಯಿದ್ದರೆ ಪಾಲಾಕ್ ಸೊಪ್ಪು ಸೇವಿಸುವುದರಿಂದ ಮೆದುಳಿನ ನರಕೋಶಗಳ ವೃದ್ಧಿಯಾಗಿ ನೆನಪಿನ ಶಕ್ತಿ ಹೆಚ್ಚಿಸುತ್ತದೆ.

* ಸಂಧಿವಾತದ ಸಂಸ್ಯೆಯಿದ್ದವರೂ ಕೂಡ ಪಾಲಾಕ್ ಸೊಪ್ಪು ಸೇವಿಸಬಹುದು.

* ಪಾಲಾಕ್ ಸೊಪ್ಪಿನಲ್ಲಿ ಹೆಚ್ಚು ನಾರಿನಂಶ ಹಾಗೂ ನೀರಿನಂಶ ಇರುವುದರಿಂದ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವುದಲ್ಲದೆ, ಜೀರ್ಣಶಕ್ತಿಗೆ ಸಹಕರಿಸುತ್ತದೆ.

ಹಾಗಿದ್ದರೆ ಇನ್ನೇಕೆ ತಡ. ಇಂದಿನಿಂದಲೇ ನಿಮ್ಮ ಆಹಾರ ಪದ್ಧತಿಯಲ್ಲಿ ಪಾಲಾಕ್ ಸೊಪ್ಪನ್ನು ಅಳವಡಿಸಿಕೊಂಡು ಆರೋಗ್ಯ ವೃದ್ಧಿಸಿಕೊಳ್ಳಿ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago