ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಆರ್ಎಸ್ಎಸ್ ಸದಸ್ಯರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು ಎಂದು ಮಂಗಳವಾರ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಅವರು, ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್ಎಸ್ಎಸ್ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದರು.
ಆರ್ ಎಸ್ಎಸ್, ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ಒಂದು ರಾಜಕೀಯ ಸಂಸ್ಥೆಯಾಗಿದೆ. ಆರ್ಎಸ್ಎಸ್ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿದೆ. ಈ ಆರ್ಥಿಕ ವ್ಯವಹಾರಗಳಿಗೆ ಲೆಕ್ಕಪತ್ರವನ್ನು ನೀಡಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಇದೆ. ಯಾವುದೇ ಸಂಘಟನೆ ತನ್ನನ್ನು ತಾನು ‘ಹಿಂದೂ ಧರ್ಮ’ದ ನೆರಳಲ್ಲಿ ಬಚ್ಚಿಟ್ಟುಕೊಂಡು, ಕಾನೂನಿನಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಗೃಹ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ನೋಂದಣಿ ಬಗ್ಗೆ ಪ್ರಶ್ನಿಸುತ್ತಿರುವುದು ಕಾನೂನು ಪ್ರಕಾರ ಸರಿಯಾಗಿದೆ. ಆರ್ಎಸ್ಎಸ್ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿಕೊಂಡರೂ, ವಾಸ್ತವದಲ್ಲಿ ಅದೊಂದು ರಾಜಕೀಯ ಸಂಘಟನೆ. ಅದು ಪ್ರತಿಯೊಂದು ಚುನಾವಣೆಯಲ್ಲಿಯೂ ಬಿಜೆಪಿ ಪರವಾಗಿ ಕೆಲಸ ಮಾಡುತ್ತದೆ. ಆದ್ದರಿಂದ, ಆರ್ಎಸ್ಎಸ್ ದೇಶದ ಕಾನೂನುಗಳನ್ನು ಪಾಲಿಸಬೇಕು ಮತ್ತು ನೋಂದಾಯಿಸಿಕೊಳ್ಳಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…