Featured

ಆರ್‌ಎಸ್‌ಎಸ್ ಬ್ಯಾನ್ ಬಗ್ಗೆ ಯಾರೊಬ್ಬರೂ ಹೇಳಿಕೆ ನೀಡಿಲ್ಲ , ಚರ್ಚೆಯೂ ನಡೆದಿಲ್ಲ:  ಸಚಿವ ದಿನೇಶ್ ಗುಂಡೂರಾವ್ – vishwanews24

ಆರ್‌ಎಸ್‌ಎಸ್ ಬ್ಯಾನ್ ಬಗ್ಗೆ ಯಾರೊಬ್ಬರೂ ಹೇಳಿಕೆ ನೀಡಿಲ್ಲ ಚರ್ಚೆಯೂ ನಡೆದಿಲ್ಲ:  ಸಚಿವ ದಿನೇಶ್ ಗುಂಡೂರಾವ್

ಚಿತ್ರದುರ್ಗ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂಘಟನೆಯ ಬ್ಯಾನ್ ಯಾರೊಬ್ಬರೂ ಹೇಳಿಕೆ ನೀಡಿಲ್ಲ. ಈ ಬಗ್ಗೆ ಚರ್ಚೆಗಳನ್ನೂ ಮಾಡಲಾಗಿಲ್ಲ. ಕೇವಲ ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಡೆಸದಂತೆ ಕ್ರಮವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಹಾನಗಲ್ ಗ್ರಾಮದಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್. ಬ್ಯಾನ್ ಮಾಡಬೇಕು ಎಂದು ಯಾರಾದರೂ ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದ ಸಚಿವರು, ಆ ಬಗ್ಗೆ ಯಾರೂ ಹೇಳಿಲ್ಲ, ಚರ್ಚೆಯೇ ಮಾಡಿಲ್ಲ ಎಂದು ಖಚಿತಪಡಿಸಿದರು. ಸಂವಿಧಾನದ ಅನ್ವಯ ಎಲ್ಲರಿಗೂ ಮುಕ್ತವಾದ ಅವಕಾಶವಿದೆ. ಆದರೆ, ಆರ್.ಎಸ್.ಎಸ್. ಒಂದು ರಾಜಕೀಯ ಸಂಘಟನೆ ಎಂಬ ಬಗ್ಗೆ ಸಂದೇಹವಿಲ್ಲ ಎಂದ ಅವರು, ಈ ಕಾರಣಕ್ಕೆ ಸರ್ಕಾರಿ ಸ್ಥಳ, ಶಾಲೆಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳನ್ನು ನಡೆಸಬಾರದು ಎಂದು ಒತ್ತಿ ಹೇಳಿದರು.

ಶಾಲೆ, ಕಾಲೇಜುಗಳಲ್ಲಿ ರಾಜಕೀಯವನ್ನು ತರುವುದು ಸರಿಯಲ್ಲ. ಯಾವುದೇ ಸಂಸ್ಥೆಯಾಗಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆದುಕೊಳ್ಳಬೇಕು ಮತ್ತು ಅದನ್ನು ಆರ್.ಎಸ್.ಎಸ್. ಶಾಖೆಗಳಿಗಾಗಿ ಉಪಯೋಗಿಸಬಾರದು ಎಂದು ತಿಳಿಸಿದರು. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗಲೇ ಸರ್ಕಾರಿ ಜಾಗವನ್ನು ಯಾರೂ ಬಳಸಬಾರದೆಂದು ಆದೇಶವಿತ್ತು. ಸರ್ಕಾರಿ ಜಾಗಗಳಲ್ಲಿ, ಅದರಲ್ಲೂ ಮುಖ್ಯವಾಗಿ ಶಾಲಾ-ಕಾಲೇಜು ಆವರಣಗಳಲ್ಲಿ ಯಾವುದೇ ರಾಜಕೀಯ ಸಂಘಟನೆಗಳ ಚಟುವಟಿಕೆಗೆ ಅವಕಾಶ ನೀಡಬಾರದು ಎಂಬುದು ಆದೇಶದ ಉದ್ದೇಶವಾಗಿದೆ ಎಂದರು.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

21 minutes ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

21 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

21 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

23 hours ago