KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಚಿತ್ರದುರ್ಗ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂಘಟನೆಯ ಬ್ಯಾನ್ ಯಾರೊಬ್ಬರೂ ಹೇಳಿಕೆ ನೀಡಿಲ್ಲ. ಈ ಬಗ್ಗೆ ಚರ್ಚೆಗಳನ್ನೂ ಮಾಡಲಾಗಿಲ್ಲ. ಕೇವಲ ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಡೆಸದಂತೆ ಕ್ರಮವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಹಾನಗಲ್ ಗ್ರಾಮದಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್. ಬ್ಯಾನ್ ಮಾಡಬೇಕು ಎಂದು ಯಾರಾದರೂ ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದ ಸಚಿವರು, ಆ ಬಗ್ಗೆ ಯಾರೂ ಹೇಳಿಲ್ಲ, ಚರ್ಚೆಯೇ ಮಾಡಿಲ್ಲ ಎಂದು ಖಚಿತಪಡಿಸಿದರು. ಸಂವಿಧಾನದ ಅನ್ವಯ ಎಲ್ಲರಿಗೂ ಮುಕ್ತವಾದ ಅವಕಾಶವಿದೆ. ಆದರೆ, ಆರ್.ಎಸ್.ಎಸ್. ಒಂದು ರಾಜಕೀಯ ಸಂಘಟನೆ ಎಂಬ ಬಗ್ಗೆ ಸಂದೇಹವಿಲ್ಲ ಎಂದ ಅವರು, ಈ ಕಾರಣಕ್ಕೆ ಸರ್ಕಾರಿ ಸ್ಥಳ, ಶಾಲೆಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳನ್ನು ನಡೆಸಬಾರದು ಎಂದು ಒತ್ತಿ ಹೇಳಿದರು.
ಶಾಲೆ, ಕಾಲೇಜುಗಳಲ್ಲಿ ರಾಜಕೀಯವನ್ನು ತರುವುದು ಸರಿಯಲ್ಲ. ಯಾವುದೇ ಸಂಸ್ಥೆಯಾಗಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆದುಕೊಳ್ಳಬೇಕು ಮತ್ತು ಅದನ್ನು ಆರ್.ಎಸ್.ಎಸ್. ಶಾಖೆಗಳಿಗಾಗಿ ಉಪಯೋಗಿಸಬಾರದು ಎಂದು ತಿಳಿಸಿದರು. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗಲೇ ಸರ್ಕಾರಿ ಜಾಗವನ್ನು ಯಾರೂ ಬಳಸಬಾರದೆಂದು ಆದೇಶವಿತ್ತು. ಸರ್ಕಾರಿ ಜಾಗಗಳಲ್ಲಿ, ಅದರಲ್ಲೂ ಮುಖ್ಯವಾಗಿ ಶಾಲಾ-ಕಾಲೇಜು ಆವರಣಗಳಲ್ಲಿ ಯಾವುದೇ ರಾಜಕೀಯ ಸಂಘಟನೆಗಳ ಚಟುವಟಿಕೆಗೆ ಅವಕಾಶ ನೀಡಬಾರದು ಎಂಬುದು ಆದೇಶದ ಉದ್ದೇಶವಾಗಿದೆ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…