ಮೈಸೂರು,: ಬಿಜೆಪಿಗೆ ಸಾಮಾಜಿಕ ನ್ಯಾಯ ನೀಡಬೇಕು ಎಂಬುದಿದ್ದರೆ ಆರ್ಎಸ್ಎಸ್ನ ಮುಖ್ಯ ಸರ ಸಂಘ ಚಾಲಕರಾಗಿ ಮೋಹನ್ ಭಾಗವತ್ ಅವರ ಸ್ಥಾನಕ್ಕೆ ದ್ರೌಪದಿ ಮುರ್ಮು ಅವರಂತಹ ಮಹಿಳೆಯನ್ನು ನೇಮಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.
ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಮೈತ್ರಿಕೂಟವು ಬುಡಕಟ್ಟು ಮಹಿಳೆಯನ್ನು ಆಯ್ಕೆ ಮಾಡಿರುವುದು ಸಾಮಾಜಿಕ ನ್ಯಾಯವೂ ಅಲ್ಲ, ಇದರಲ್ಲಿ ಯಾವ ವಿಶೇಷವೂ ಅಲ್ಲ. ಒಂದು ವೇಳೆ ಸಾಮಾಜಿಕ ನ್ಯಾಯ ನೀಡಬೇಕು ಎಂಬುದಿದ್ದರೆ ಆರ್ಎಸ್ಎಸ್ನ ಮುಖ್ಯ ಸರ ಸಂಘ ಚಾಲಕರಾಗಿ ಅವರಂತಹ ಮಹಿಳೆಯನ್ನು ನೇಮಿಸಲಿ ಎಂದು ಹೇಳಿದರು.
ಮುರ್ಮು ಅವರು ಬಿಜೆಪಿಯವರೇ ಆಗಿದ್ದಾರೆ. ರಾಜ್ಯಪಾಲೆ ಸೇರಿ ಹಲವು ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಯಾಗಿ ಪ್ರಮುಖ ಕೆಲಸ ಮಾಡಲು ಬಿಜೆಪಿಗರು ಬಿಡುವುದಿಲ್ಲ.ಹಿಂದೆ ರಾಜೇಂದ್ರ ಪ್ರಸಾದ್ ಅವರು ಮಾಡಿದಂತೆ ಕೆಲಸ ಮಾಡಲು ಆಗುತ್ತದೆಯೇ? ರಾಮನಾಥ್ ಕೋವಿಂದ್ ಕೂಡ ರಾಷ್ಟ್ರಪತಿ ಆಗಿದ್ದರು. ಅವರು ಏನು ಮಾಡಿದರು ? ಇದು ಅವರಂತೆ ನಾಮಕವಾಸ್ಥೆಗೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…