Featured

ಆರ್ಥಿಕತೆಯಲ್ಲಿ ಭಾರತಕ್ಕೆ ವಿಶ್ವದಲ್ಲೇ 5ನೇ ಸ್ಥಾನ : ಪ್ರಧಾನಿ ಮೋದಿಗೆ ಮತ್ತೊಮ್ಮೆ ಯಶಸ್ಸು – Vishwanews24

ನವದೆಹಲಿ: ಅಮೆರಿಕಾ, ಚೀನಾ, ಜಪಾನ್, ಜರ್ಮನಿ, ಮತ್ತು ಇಂಗ್ಲೆಂಡ್ ಹೊರತು ಪಡಿಸಿದರೆ ಪ್ರಸ್ತುತ ಭಾರತ 2.6 ಟ್ರಿಲಿಯನ್ ಅಮೆರಿಕನ್ ಡಾಲರ್ ನೊಂದಿಗೆ ವಿಶ್ವದ ಆರನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿದೆ. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ ಮತ್ತಿತರ ಕ್ರಮಗಳನ್ನು ಕೈಗೊಳ್ಳುವ ಮೂಲಕ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ- ದಕ್ಷಿಣ ಆಫ್ರಿಕಾ ವ್ಯಾಪಾರ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತ ವೇಗವಾಗಿ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಿದ್ದು, ಮುಂದಿನ ಪೀಳಿಗೆಯ ಮೂಲಸೌಕರ್ಯಗಳೊಂದಿಗೆ ನವ ಭಾರತ ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿರುವುದಾಗಿ ಹೇಳಿದರು.ದೇಶದಲ್ಲಿ ಹೂಡಿಕೆ ವಾತಾವರಣವನ್ನು ಇನ್ನಷ್ಟು ಸುಧಾರಿಸಲು “ದಿನನಿತ್ಯದ ಆಧಾರದ ಮೇಲೆ” ಸುಧಾರಣೆ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿ ಭಾರತ ಸಾಗುತ್ತಿರುವುದಾಗಿ  ಅವರು ತಿಳಿಸಿದ್ದಾರೆ.

ವಿಶ್ವ ಬ್ಯಾಂಕಿನ ಸುಲಭ ವ್ಯವಹಾರ ಮಾಡುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 77 ನೇ ಸ್ಥಾನಕ್ಕೇರಿದೆ. ಕಳೆದ ನಾಲ್ಕು ವರ್ಷಗಳಲ್ಲಿ 65 ಸ್ಥಾನ ಮೇಲಕ್ಕೇರಿದ್ದು, ಮುಂದಿನ ಪೀಳಿಗೆಗೆ ಕೌಶಲ್ಯಾಭಿವೃದ್ದಿ ಮತ್ತು ಮೂಲಸೌಕರ್ಯ ಒದಗಿಸುವ ಮೂಲಕ ನವ ಭಾರತ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿರುವುದಾಗಿ ನರೇಂದ್ರ ಮೋದಿ ತಿಳಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

23 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

43 minutes ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

1 hour ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago