ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಮತ್ತು ಕಾರ್ಯಕ್ರಮ ಆಯೋಜಿಸುವ ಸಂಸ್ಥೆಗೆ ಪ್ರತಿ ಜೋಡಿಗೆ 5 ಸಾವಿರ ರೂ.ಗಳನ್ನು ನೀಡುವ ಕಾರ್ಯಕ್ರಮಕ್ಕೆ ಸರಕಾರದ ಮಂಜೂರಾತಿ ದೊರೆತಿದೆ.
ರಾಜ್ಯ ಬಜೆಟ್ ನಲ್ಲಿ ಈ ಕುರಿತು ಘೋಷಿಸಲಾಗಿತ್ತು. ಇದೀಗ ಸರಕಾರಿ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿಯಲ್ಲಿ 5 ಸಾವಿರ ಜೋಡಿ ಮಿತಿವರೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಝಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯು ವರೆಗೆ ತರಗತಿ ಪ್ರಾರಂಭಿಸಲು ಘೋಷಿಸಲಾಗಿತ್ತು. ಪ್ರಸಕ್ತ ವರ್ಷ 100 ಆಝಾದ್ ಶಾಲೆ ಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಮೇಲ್ದರ್ಜೆ ಗೇರಿಸಲು ಆದೇಶ ಹೊರಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…