ಆರ್ಥಿಕ ಅಡಚಣೆಗೆ ನೊಂದು ಆತ್ಮಹತ್ಯೆಗೆ ಶರಣಾದ ಜಿಲ್ಲಾ ಜೆಡಿಎಸ್ ವಕ್ತಾರ -Vishwanews24

Featured, ಉಡುಪಿ

ಉಡುಪಿ: ಆರ್ಥಿಕ ಸಮಸ್ಯೆಯಿಂದ ಮನನೊಂದು ಉಡುಪಿಯ ಜಿಲ್ಲಾ ಜೆಡಿಎಸ್ ವಕ್ತಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಂಗ್ರಪಾಡಿ ಬೈಲೂರಿನಲ್ಲಿ ನಡೆದಿದೆ.

ಜಾತ್ಯತಿತ ಜನತಾ ದಳದ (ಜೆಡಿಎಸ್) ಜಿಲ್ಲಾ ವಕ್ತಾರ, ಭಿರ್ತಿ ಕೋ. ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಜಿ. ಬೈಲೂರು (37) ಆತ್ಮಹತ್ಯೆ ಶರಣಾದವರು.

ಕಳೆದ ರಾತ್ರಿ ತಂದೆ-ತಾಯಿ ತೀರ್ಥಹಳ್ಳಿಯ ಮನೆಗೆ ಹೋಗಿದ್ದಾಗ ಕೊರಂಗ್ರಪಾಡಿ ಜಂಕ್ಷನ್ ಬಳಿಯ ತಮ್ಮ ಬಾಡಿಗೆ ಮನೆಯಲ್ಲಿ ಪ್ರದೀಪ್ ನೇಣಿಗೆ ಶರಣಾಗಿದ್ದಾರೆ. ವಿವಾಹಿತರಾಗಿದ್ದ ಅವರು, ಕೆಲವು ಸಮಯಗಳ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಆರ್ಥಿಕ ಮುಗ್ಗಟ್ಟು ಕಾರಣವೆಂದು ಪೊಲೀಸರು ತಿಳಿಸಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.