Featured

ಆರ್ಥಿಕ ದುರ್ಬಲರಿಗೆ ಒಳ್ಳೆಯ ಆಹಾರ ಸಿಗುವ ಸಲುವಾಗಿ ಈ ಪ್ಯಾಕೇಜ್ ಕೊಡುತ್ತಿದ್ದೀವಿ : ಸಿಎಂ ಬೊಮ್ಮಾಯಿ – Vishwanews24

ಕಾಂಗ್ರೆಸ್ ನಮ್ಮ ಸರ್ಕಾರದ ಯೋಜನೆಗಳನ್ನೇ  ಕಾಪಿ ಮಾಡಿದೆ :ಸಿಎಂ ಬೊಮ್ಮಾಯಿ

ಮೈಸೂರು: ಪಡಿತರದಲ್ಲಿ 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಜೊತೆಗೆ ಅರ್ಧ ಲೀಟರ್ ನಂದಿನಿ ಹಾಲು ಸೇರಿಸಿ ನಾವು ಸಂಪೂರ್ಣ ಆರೋಗ್ಯ ಕಿಟ್ ಕೊಡುತ್ತಿದ್ದೇವೆ. ಆರ್ಥಿಕ ದುರ್ಬಲರಿಗೆ ಒಳ್ಳೆಯ ಆಹಾರ ಸಿಗುವ ಸಲುವಾಗಿ ಈ ಪ್ಯಾಕೇಜ್ ಕೊಡುತ್ತಿದ್ದೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಅವರು ಇಂದು ಮೈಸೂರಿನಲ್ಲಿ ಸಾರ್ವಜನಿಕ ರೋಡ್ ಶೋಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ರೈತರು ಬೆಳೆಯುವ ಜೋಳ, ರಾಗಿ ಸೇರಿದಂತೆ ಎಲ್ಲ ಸಿರಿಧಾನ್ಯಗಳನ್ನು ಅವರಿಂದ ಖರೀದಿ ಮಾಡಿ ಅವರಿಗೆ ಬೆಂಬಲ ನೀಡುವ ಯೋಜನೆ ನಮ್ಮದು. ಇದರಿಂದ ಪೌಷ್ಠಿಕ ಆಹಾರ ಕೂಡ ಸಿಗುತ್ತದೆ. ಹಾಲು ಕೊಡುವುದರಿಂದ ರೈತರಿಂದ ದೊಡ್ಡ ಪ್ರಮಾಣದ ಖರೀದಿ ಆಗುತ್ತದೆ ಮತ್ತು ಅವರಿಗೆ ಉತ್ಪಾದನೆ ಮಾಡಲು ಬೆಂಬಲ ಸಿಗುತ್ತದೆ. ಈ ಬಗ್ಗೆ ಸಮಗ್ರ ಚಿಂತನೆ ಮಾಡಿ ಈ ಯೋಜನೆ ಮಾಡಿದ್ದೇವೆ. ಸಿರಿಧಾನ್ಯ ಉತ್ಪಾದನೆಗೆ ಸಾಕಷ್ಟು ಪ್ರೋತ್ಸಾಹ ಸಿಗುತ್ತಿದೆ. ಬೆಲೆ ಕಡಿಮೆ ಇದ್ದ ರಾಗಿ ಪಡಿತರದಲ್ಲಿ ಕೊಟ್ಟ ಮೇಲೆ ಹೆಚ್ಚಿನ ಉತ್ಪಾದನೆ ಆಗ್ತಿದೆ ಮತ್ತು ಉತ್ತಮ ಬೆಲೆ ಕೂಡ ಸಿಗ್ತಿದೆ. ನಮ್ಮ ಪೋಷಣ್ ಅಭಿಯಾಣದಲ್ಲಿ ಇದೆಲ್ಲವೂ ಸೇರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಘೋಷಣೆ ಮಾಡಿದ್ದ ಯೋಜನೆಗಳಲ್ಲಿ 65% ಅವರೇ ಮಾಡಿಲ್ಲ. ಮೊದಲು ಅವರು ರಿಪೋರ್ಟ್ ಕಾರ್ಡ್ ಕೊಡಲಿ. ನಮ್ಮ ಕಾಲದಲ್ಲಿ ಕೋವಿಡ್ ಬಂದಿದ್ದರಿಂದ ಸ್ವಲ್ಪ ಮಾರ್ಪಾಡು ಮಾಡಿಕೊಂಡು ಹೊಸ ಸ್ಕೀಂಗಳನ್ನು ಕೊಟ್ಟಿದ್ದೇವೆ. ಇದನ್ನು ವಿಧಾನಸಭೆಯಲ್ಲೂ ಹೇಳಿದ್ದೇನೆ. ನಾನು ಬಜೆಟ್ ನಲ್ಲೇ ವಿದ್ಯಾರ್ಥಿನಿಯರಿಗೆ ಮತ್ತು ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ್ದೆ. ಎಸ್ಸಿ ಎಸ್ಟಿ ಕುಟುಂಬಕ್ಕೆ 75 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದೆ, ಅದನ್ನೇ ಕಾಂಗ್ರೆಸ್ ಅವರು ಕಾಪಿ ಮಾಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

14 hours ago